ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಇಂದು ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.

ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಪಡಿತರ ಕಾರ್ಡ್ ಗಳಿದ್ದು, ಸುಮಾರು 15 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 729 ನ್ಯಾಯಬೆಲೆ ಅಂಗಡಿಗಳನ್ನು ಹೊಂದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಅಕ್ರಮವಾಗಿ ಹೊಂದಿರುವ ಅನರ್ಹ ಪಡಿತರ ಕಾರ್ಡುಗಳನ್ನು ಪತ್ತೆ ಹಚ್ಚುವುದರೊಂದಿಗೆ

ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಿಸಲು ಕ್ರಮ ವಹಿಸುತ್ತಿದ್ದು ತಾವು ಅರ್ಹರನ್ನು ಗುರುತಿಸಲು ಸೂಚನೆ ನೀಡಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವ ಕಡೆ ಗಮನವಹಿಸಿ ಪೆಟ್ರೋಲ್ ಬಂಕ್ ಗಳಲ್ಲಿ  ನಾಗರಿಕರಿಗೆ ಯಾವುದೇ ಮೋಸವಾಗದಾಗೆ ನಿಗಾವಹಿಸಬೇಕು. ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆಯ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಉಪ ನಿರ್ದೇಶಕರಾದ ಮಧು ಸೂದನ್ ಹಾಗೂ ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

9 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

9 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

14 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago