ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಇಂದು ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಪಡಿತರ ಕಾರ್ಡ್ ಗಳಿದ್ದು, ಸುಮಾರು 15 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 729 ನ್ಯಾಯಬೆಲೆ ಅಂಗಡಿಗಳನ್ನು ಹೊಂದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಅಕ್ರಮವಾಗಿ ಹೊಂದಿರುವ ಅನರ್ಹ ಪಡಿತರ ಕಾರ್ಡುಗಳನ್ನು ಪತ್ತೆ ಹಚ್ಚುವುದರೊಂದಿಗೆ
ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಿಸಲು ಕ್ರಮ ವಹಿಸುತ್ತಿದ್ದು ತಾವು ಅರ್ಹರನ್ನು ಗುರುತಿಸಲು ಸೂಚನೆ ನೀಡಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವ ಕಡೆ ಗಮನವಹಿಸಿ ಪೆಟ್ರೋಲ್ ಬಂಕ್ ಗಳಲ್ಲಿ ನಾಗರಿಕರಿಗೆ ಯಾವುದೇ ಮೋಸವಾಗದಾಗೆ ನಿಗಾವಹಿಸಬೇಕು. ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆಯ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಉಪ ನಿರ್ದೇಶಕರಾದ ಮಧು ಸೂದನ್ ಹಾಗೂ ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…
ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…
ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್ಗಳು ಸುಟ್ಟು ಕರಕಲಾದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…
ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…
ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…