Categories: ಲೇಖನ

ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..

ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ ಚಿಂತಾಜನಕ ಎಂದು ಕೆಲವು ಜನರನ್ನು, ಕೆಲವು ಏರಿಯಾಗಳಲ್ಲಿ ಮಾತನಾಡಿಸಿ ನೀರಿನ ಟ್ಯಾಂಕರ್ ನ ಬೆಲೆ ಏರಿಕೆ ಮತ್ತು ಮಾಫಿಯಾ ಬಗ್ಗೆ ಪುಂಖಾನುಪುಂಖವಾಗಿ  ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದಾರೆ……

ಆದರೆ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು ಪತ್ರಿಕಾಗೋಷ್ಠಿ ಕರೆದು ನೀರಿನ ಲಭ್ಯತೆಯ ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಬೆಂಗಳೂರಿಗೆ ತಿಂಗಳಿಗೆ 1.54 ಟಿಎಂಸಿ ನೀರಿನ ಅವಶ್ಯಕತೆ ಇದೆ. ಆ ಲೆಕ್ಕದಲ್ಲಿ ಜುಲೈ ಅಂತ್ಯದವರೆಗೆ ಸುಮಾರು 8 ರಿಂದ 9 ಟಿಎಂಸಿ ನೀರು ಬೇಕಾಗುತ್ತದೆ. ಈಗ ಕೆ ಆರ್ ಎಸ್ ಡ್ಯಾಮ್ ನಲ್ಲಿ ಇರುವ ನೀರಿನ ಲಭ್ಯತೆ ಸುಮಾರು 33 ಟಿಎಂಸಿ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಕೆಲವು ಭಾಗಗಳಿಗೆ ಸದ್ಯಕ್ಕೆ ನೀರಿನ ಯಾವುದೇ ಸಮಸ್ಯೆ ಇಲ್ಲ……

ಇಷ್ಟು ಸ್ಪಷ್ಟವಾಗಿ ಜಲ ಮಂಡಳಿಯ ಅಧ್ಯಕ್ಷರೇ ಹೇಳುತ್ತಿರುವಾಗ ಅನಾವಶ್ಯಕವಾಗಿ ಜನರಲ್ಲಿ ನೀರಿನ ಕ್ಷಾಮದ ಬಗ್ಗೆ ಭೀತಿ ಮೂಡಿಸಿ ಮಜಾ ನೋಡುತ್ತಿರುವ ಈ ಮಾಧ್ಯಮಗಳಿಗೆ ಏನೆನ್ನಬೇಕು…..?

ಹೌದು, ಒಂದಷ್ಟು ಸಮಸ್ಯೆಗಳು ಇರುತ್ತವೆ. ಆದರೆ ಅದನ್ನು ಜನರಿಗೆ ತಲುಪಿಸುವಾಗ ಅತ್ಯಂತ ವಿವೇಚನೆಯಿಂದ, ಪ್ರಬುದ್ಧತೆಯಿಂದ, ಜವಾಬ್ದಾರಿಯಿಂದ ಅವರ ಮನಸ್ಸುಗಳಿಗೆ ಹೆಚ್ಚು ಘಾಸಿಯಾಗದಂತೆ ಅರ್ಥಪೂರ್ಣವಾಗಿ ಸುದ್ದಿ ತಲುಪಿಸಿದರೆ ಎಷ್ಟೊಂದು ಒಳ್ಳೆಯ ಕೆಲಸ ಮಾಡಿದಂತಾಗುವುದಿಲ್ಲವೇ…..

ಕೇವಲ ಈ ವಿಷಯ ಮಾತ್ರವಲ್ಲ ಇನ್ನು ಅನೇಕ ವಿಷಯಗಳಲ್ಲಿ ಮಾಧ್ಯಮಗಳು ಅತಿರಂಜಿತ ಸುದ್ದಿಗಳನ್ನು ಪ್ರಸಾರ ಮಾಡಿ ಜನರಲ್ಲಿ ಆತಂಕ ಸೃಷ್ಟಿಸುತ್ತಿವೆ. ಡಿಸೆಂಬರ್ ಜನವರಿಯ ಪ್ರಾರಂಭದಲ್ಲಿ ಮತ್ತೆ ಕೊರೋನ ಹಾವಳಿ ಎಂದು ಅತಿರೇಕದ ಸುದ್ದಿಗಳನ್ನು ಪ್ರಸಾರ ಮಾಡಿ ಜನರಲ್ಲಿ ಭೀತಿ ಉಂಟುಮಾಡಿದ್ದವು. ಕೊನೆಗೆ ಅದು ಅಂತಹ ಪರಿಣಾಮ ಬೀರಲಿಲ್ಲ. ಹಾಗೆಯೇ ಎಲ್ಲೋ ಯಾವುದೋ ಒಂದು ವೈರಸ್ ಮಾರಣಾಂತಿಕವಾಗಿದ್ದರೆ ಅದನ್ನೇ ಸಾಂಕ್ರಾಮಿಕವಾಗಿ ಇಡೀ ದೇಶ ಇಡೀ ನಗರ ನಾಶವಾಗುತ್ತದೆ ಎಂದು ಜನರ ಜೀವನೋತ್ಸಾಹವನ್ನೇ ಕುಗ್ಗಿಸುತ್ತವೆ…..

ಮಾಧ್ಯಮಗಳ ಈಗಿನ ಮನಸ್ಥಿತಿ ಹೇಗಾಗಿದೆ ಎಂದರೆ ಏನಾದರೂ ಭಯಂಕರ ಘಟನೆಗಳು ನಿರಂತರವಾಗಿ ನಡೆಯುತ್ತಿರಲೇಬೇಕು. ಅದು ಬಾಂಬ್ ಸ್ಫೋಟವೇ ಆಗಿರಲಿ, ರಾಜಕೀಯ ದೊಂಬರಾಟವೇ ಆಗಿರಲಿ, ಅಪಘಾತ ಆತ್ಮಹತ್ಯೆಗಳೇ ಆಗಿರಲಿ, ಭ್ರಷ್ಟಾಚಾರವೇ ಆಗಿರಲಿ, ಚಳುವಳಿಗಳೇ ಆಗಿರಲಿ, ಒಟ್ಟಿನಲ್ಲಿ ಜನರಿಗೆ ಕುತೂಹಲ ಮೂಡಿಸುವ ಉದ್ರೇಕಿಸುವ ಕಂಟೆಂಟ್ಗಳತ್ತ ಇವರ ಆಸಕ್ತಿ……

ಇದು ಜನಸಾಮಾನ್ಯರಲ್ಲಿ ಸಹ ಒಂದು ರೀತಿ ಅತೃಪ್ತ, ಅಸಮಾಧಾನಿತ, ಅಸಹನೀಯ ಮನೋಭಾವ ಬೆಳೆಯಲು ಕಾರಣವಾಗಿದೆ. ಜನರಲ್ಲಿಯು ಕೂಡ ಬ್ರೇಕಿಂಗ್ ನ್ಯೂಸ್ ಗಳ ಮಧ್ಯೆ ಸಮಗ್ರ ಚಿಂತನೆ ಇಲ್ಲವಾಗಿದೆ. ಒಂದು ವಿಷಯವನ್ನು ನಿಧಾನವಾಗಿ, ತಾಳ್ಮೆಯಿಂದ ಎಲ್ಲಾ ಮುನ್ನೂರು ಅರವತ್ತು ಡಿಗ್ರಿ ಕೋನಗಳಿಂದ ಸತ್ಯ ಮತ್ತು ವಾಸ್ತವದ ಪ್ರಜ್ಞೆಯಲ್ಲಿ ಯೋಚಿಸುವ ಶಕ್ತಿ ಮತ್ತು ವಿಧಾನವನ್ನೇ ಕಳೆದುಕೊಳ್ಳಲಾಗಿದೆ…..

ಕೆಲವೊಮ್ಮೆ ಅನಿಸುತ್ತದೆ ಇವರು ಪತ್ರಕರ್ತರೇ, ನಿರೂಪಕರೇ, ಸುದ್ದಿ ಮಾಧ್ಯಮಗಳ ನೌಕರರೇ, ಮಾಧ್ಯಮ ಕಾರ್ಯಕರ್ತರೇ, ದುರ್ಘಟನೆಗಳ ವಕ್ತಾರರೇ, ರಾಯಭಾರಿಗಳೇ, ಸುದ್ದಿಗಳ ಸೃಷ್ಟಿಕರ್ತರೇ, 24*7 ಕಾರಣದಿಂದ ಮಾಧ್ಯಮ ಲೋಕವನ್ನು ಹಳ್ಳ ಹಿಡಿಸುತ್ತಿರುವವರೇ ಒಂದೂ ಅರ್ಥವಾಗುತ್ತಿಲ್ಲ…..

ಮಾಧ್ಯಮಗಳು ಒಂದು ವಿಷಯದ ಬಗ್ಗೆ ಹೆಚ್ಚು ಗಮನಸೆಳೆದರೆ ಅದು ಸರ್ಕಾರಕ್ಕೆ ತಲುಪಿ ಆ ವಿಷಯದಲ್ಲಿ ಒಂದಷ್ಟು ಕಾರ್ಯ ಚಟುವಟಿಕೆಗಳು ನಡೆಯುತ್ತವೆ ಎಂಬುದು ನಿಜ. ಆದರೆ ಅವರು ನಿಜಕ್ಕೂ ಗಮನ ಸೆಳೆಯಬೇಕಾದ ಬಹು ಮುಖ್ಯ ವಿಷಯಗಳನ್ನು ಮರೆಮಾಚುತ್ತಾರೆ. ಎಲ್ಲೋ, ಯಾವುದೋ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿ ಅನೇಕ  ಆಕಾಂಕ್ಷಿಗಳು ಪ್ರಯತ್ನ ಪಡುತ್ತಿರುತ್ತಾರೆ. ಅದನ್ನೇ ದೊಡ್ಡ ವಿಷಯವೆಂಬಂತೆ ಸಾರ್ವಜನಿಕರಿಗೆ ಒಂದು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡುತ್ತಾರೆ. ಇದು ಎಷ್ಟೊಂದು ಅನಾವಶ್ಯಕವಲ್ಲವೇ……

ಈ ಸಮಾಜದ ಎಷ್ಟೋ ಮಾನವೀಯ ಮೌಲ್ಯಗಳು ಅಧ:ತನವಾಗಿ ವಿನಾಶದ ಅಂಚಿನಲ್ಲಿವೆ. ಕನಿಷ್ಠ ಆಗಾಗ ಇವುಗಳ ಪುನರುತ್ಥಾನದ ಬಗ್ಗೆ ಕೆಲವು ಕಾರ್ಯಕ್ರಮಗಳನ್ನು ಮಾಡುವುದಾದರೆ ಅದು ಅವರ ನಿಜವಾದ ಸಂವೇದನಾಶೀಲ ಪತ್ರಕರ್ತರ ಜವಾಬ್ದಾರಿಯಾಗಿರುತ್ತದೆ. ಕೇವಲ ಕೆಟ್ಟ ಭ್ರಷ್ಟ ದುಷ್ಟ ಸುಳ್ಳು ಸುದ್ದಿಗಳೇ ಪ್ರಾಮುಖ್ಯತೆ ಪಡೆದಾಗ ಸಮಾಜ ಸಹ ಬಹುತೇಕ ಅದರ ಪ್ರಭಾವಕ್ಕೆ ಒಳಗಾಗಿ ಆ ನಿಟ್ಟಿನಲ್ಲಿಯೇ ಯೋಚಿಸುವಂತಾಗುತ್ತದೆ…….

ಒಂದು ಸುದ್ದಿ ಅಧಿಕೃತವಾಗಿ ಪ್ರಸಾರವಾಗಬೇಕಾದರೆ ಅದನ್ನು ಸಮಗ್ರವಾಗಿ ಚಿಂತಿಸಿ ಹೊರಗೆಡಹಬೇಕಾಗುತ್ತದೆ. ಕೇವಲ ತಮ್ಮ ಟಿ ಆರ್ ಪಿ  ಅಥವಾ ಜನರ ಆಕರ್ಷಣೆ ಮುಖ್ಯವಾಗುವುದಾದರೆ ಅದು ಮಾಧ್ಯಮ ಲೋಕದ, ಈ ಸಮಾಜದ ಸಾಂವಿಧಾನಿಕ ಮೌಲ್ಯಗಳ ದುರಂತ ಎಂದು ಕರೆಯಬೇಕಾಗುತ್ತದೆ.

ಈಗಿನ ಪರಿಸ್ಥಿತಿಯಲ್ಲಿ ಇದೇ ನಿಜ. ಕನಿಷ್ಠ ಇನ್ನಾದರೂ ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿದರೆ ನಾವೆಲ್ಲರೂ ನಿಮಗೆ ಕೃತಜ್ಞರಾಗಿರುತ್ತೇವೆ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

27 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

39 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

24 hours ago