ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಹೇಳಿದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ *75 ನೇ ಮಾನವ ಹಕ್ಕುಗಳ ದಿನಾಚರಣೆ* ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ರಕ್ಷಣೆ ನೀಡುವ ಹಕ್ಕುಗಳನ್ನು ವಿವರಿಸಲಾಗಿದೆ. ಜೀವನದ ಸ್ವಾತಂತ್ರ್ಯ ಸಮಾನತೆ ಮತ್ತು ವ್ಯಕ್ತಿಯ ಘನತೆಯ ಹಕ್ಕುಗಳೇ ಮಾನವ ಹಕ್ಕುಗಳು, ಎಲ್ಲಾ ಮಾನವರು ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು ಮತ್ತು ಪ್ರತಿಯೊಬ್ಬರೂ ಯಾವುದೇ ತರಹದ ತಾರತಮ್ಯ ಇಲ್ಲದೆ ಹಕ್ಕುಗಳನ್ನು ಮತ್ತು ಸ್ವಾತಂತ್ರ್ಯವನ್ನು ಹೊಂದುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ. ಪ್ರತಿನಿತ್ಯ ಮಾನವ ಹಕ್ಕುಗಳು ಉಲ್ಲಂಘನೆ ಆಗುತ್ತಿವೆ. ಸಂವಿಧಾನ ಅಡಿಯಲ್ಲಿ ಮಾನವ ಹಕ್ಕುಗಳ ರಕ್ಷಣೆ ಮಾಡುವ ಮೂಲಕ  ಉಲ್ಲಂಘನೆಯಾಗದ ಹಾಗೇ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಮಾನವ ಹಕ್ಕುಗಳ ದಿನಾಚರಣೆಯ “ಪ್ರತಿಜ್ಞಾ ವಿಧಿ” ಯನ್ನು ಬೋಧಿಸಿದರು.

*ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ದೂರು ಸಲ್ಲಿಸಿ*

ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯದ ಮತ್ತು  ಎಲ್ಲಾ ಸಾರ್ವಜನಿಕ ಸಂಸ್ಥೆಗಳ ಆದ್ಯ ಕರ್ತವ್ಯ. ರಾಜ್ಯದ ಯಾವುದೇ ಸಾರ್ವಜನಿಕ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿಂದಾಗಲಿ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭದಲ್ಲಿ, ತೊಂದರೆಗೆ ಒಳಗಾದವರಾಗಲೀ ಅಥವಾ ಆತನ/ಆಕೆಯ ಪರವಾಗಿ ಬೇರೆ ಯಾರಾದರೂ ಸಮಸ್ಯೆ ಪರಿಹರಿಸಲು, ನ್ಯಾಯ ದೊರಕಿಸಿಕೊಳ್ಳಲು ಮಾನವ ಹಕ್ಕುಗಳ ಆಯೋಗಕ್ಕೆ ಯಾವುದೇ ಖರ್ಚಿಲ್ಲದೆ ಉಚಿತವಾಗಿ ದೂರು ನೀಡಬಹುದು. ದೂರು ಸಲ್ಲಿಸಲು ನಿಮ್ಮ ಮೊಬೈಲ್ ನ ಗೂಗಲ್ ಪ್ಲೇ ಸ್ಟೋರ್ ಮುಖಾಂತರ”ಮಾನವ ಹಕ್ಕು ರಕ್ಷಣೆ” ಎಂಬ  ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಸಲ್ಲಿಸಬಹುದು. ಅಥವಾ https://kshrc.karnataka.gov.in ಮಾನವ ಹಕ್ಕುಗಳ ಆಯೋಗದ ವೆಬ್ಸೈಟ್ ಮೂಲಕ ದೂರು ಸಲ್ಲಿಸಬಹುದು ಅಥವಾ  ದೂರು ನಿರ್ವಹಣಾ ವ್ಯವಸ್ಥೆಯ ವೆಬ್ಸೈಟ್ www.hrcnet.nic.inಆನ್ ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸ್ಪಷ್ಟವಾಗಿ ಸರಳವಾಗಿ ಸಂಪೂರ್ಣ ವಿವರನ್ನೊಳಗೊಂಡ ಒಂದು ಪತ್ರದ ಮುಖಾಂತರ ಅಥವಾ ಆಯೋಗದ ಸರಳ ನಮೂನೆ ಮುಖಾಂತರ ” ಕರ್ನಾಟಕ ಮಾನವ ಹಕ್ಕುಗಳ ಆಯೋಗ ಗೇಟ್-05, ಎಂ.ಎಸ್ ಬಿಲ್ಡಿಂಗ್, ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ದೂರು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 180042523333, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ದೂರವಾಣಿ ಸಂಖ್ಯೆ 080-22392201 ಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲರಾದ ಚಂದ್ರರೆಡ್ಡಿ ಮಾತನಾಡಿ, ಮೂಲಭೂತ ಹಕ್ಕುಗಳು ಹಾಗೂ ಮಾನವ ಹಕ್ಕುಗಳು ಒಂದಕ್ಕೊಂದು ಸಾಮ್ಯತೆ ಇದೆ, ಮಾನವ ಹಕ್ಕುಗಳ ಸಂರಕ್ಷಣೆ ಕಾಯ್ದೆ-1993ರ ಅಡಿಯಲ್ಲಿ ಮಾನವ ಹಕ್ಕುಗಳ ರಕ್ಷಣೆಯನ್ನು ಮಾಡಲಾಗುತ್ತಿದೆ. ಜೀವಿಸುವ ಹಕ್ಕು, ಆರೋಗ್ಯ ಹಕ್ಕು, ಶಿಕ್ಷಣ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯ ಹಕ್ಕು, ಶೋಷಣೆ ವಿರುದ್ಧ ಹಕ್ಕು ಸೇರಿದಂತೆ ಎಲ್ಲಾ ಮಾನವ ಹಕ್ಕುಗಳ ಬಗ್ಗೆ ವಿವರಿಸಿ, ಮಾನವ ಹಕ್ಕುಗಳು ಉಲ್ಲಂಘನೆಯಾದಾಗ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲರಾದ ಚಿನ್ನಮ್ಮ ಮಾತನಾಡಿ, 75 ನೇ ಮಾನವ ಹಕ್ಕುಗಳ ದಿನಾಚರಣೆಯನ್ನು ಸ್ವಾತಂತ್ರ್ಯ, ಸಮಾನತೆ, ಎಲ್ಲರಿಗೂ ನ್ಯಾಯ ಎಂಬ ಧ್ಯೇಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆ ತಡೆಯುವುದು, ರಕ್ಷಣೆ ಮಾಡುವುದು ಇದರ ಉದ್ದೇಶವಾಗಿದೆ. ವಿಕಲಚೇತನರು, ಸ್ಥಳಿಯರು, ವಲಸಿಗರನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಕೌಟುಂಬಿಕ ಕಲಹಗಳು ಉಂಟಾದಾಗ ನೇರವಾಗಿ ಮಾನವ ಹಕ್ಕುಗಳ ಆಯೋಗಕ್ಕೆ ಅಥವಾ ಪೋಲಿಸ್ ಸ್ಟೇಷನ್ ಗೆ ದೂರು ನೀಡದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಸಖಿ ಕೇಂದ್ರಗಳಲ್ಲಿ ಬಂದು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಹಾಗೆಯೇ ಕಾನೂನು ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜಿಲ್ಲಾ ಕಾನೂನು ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಕಾನೂನು ಸೇವೆಯನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಅನಿತಾ ಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾ ಮಟ್ಟದ ಅಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

6 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

9 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

12 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

14 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago