ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ-ಹಿರಿಯ ದೈಹಿಕ ‌ಶಿಕ್ಷಕ ಶರಣಪ್ಪ

ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯೊಂದಿಗೆ ಕ್ರೀಡೆ ಕೂಡ ಅತ್ಯವಶ್ಯಕವಾಗಿದ್ದು, ಮಕ್ಕಳು ಆಟೋಟಗಳಲ್ಲೂ ಹೆಚ್ಚಾಗಿ ಭಾಗವಹಿಸಬೇಕು ಎಂದು ಹಿರಿಯ ದೈಹಿಕ ‌ಶಿಕ್ಷಕ ಶರಣಪ್ಪ ತಿಳಿಸಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ವಿದ್ಯಾನಿಧಿ ಕಾಮರ್ಸ್ ಅಂಡ್ ಮ್ಯಾನೇಜ್ ಮೆಂಟ್ ಸ್ಟಡೀಸ್ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಕ್ರೀಡಾ ಕೂಟದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಇತ್ತೀಚೆಗೆ ಅಂಕಗಳಿಗೆ ಮಾತ್ರ ಹೆಚ್ಚಿನ ಪ್ರಾಶಸ್ತ್ಯ ‌ನೀಡುತ್ತಿದ್ದಾರೆ. ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕ್ರೀಡೆ ದೈಹಿಕ ಹಾಗೂ ‌ಮಾನಸಿಕ ಆರೋಗ್ಯ ವೃದ್ದಿಸಲು ಸಹಕಾರಿಯಾಗುತ್ತದೆ. ಇದರಿಂದ ಕ್ರೀಡಾ ಕೂಟಗಳ ಮೂಲಕ ಕ್ರೀಡೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಈ ವೇಳೆ ಮಾತನಾಡಿದ ಪ್ರಾಂಶುಪಾಲರಾದ ದಿನೇಶ್, ಕ್ರೀಡೆಯಲ್ಲಿ ಶಿಕ್ಷಣದೊಂದಿಗೆ ಸಾಧನೆ ಮಾಡಬೇಕು. ಸತತ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಇದರಿಂದ ‌ಕಲಿಕೆಯೊಂದಿಗೆ ಪ್ರತಿದಿನ ಕ್ರೀಡೆಗೆ ಸಮಯ ನೀಡಬೇಕು ಎಂದರು.

ಈ ವೇಳೆ ಎಚ್ ಒಡಿ ವಿಜಯ್ ಕುಮಾರ್ ‌ಡಿ.ಕೆ, ಶಿವಾನಂದ.ಜಿ, ಶ್ರೀಧರ್, ತೇಜಸ್ವಿನಿ, ಕೃಷ್ಣ ಚೈತನ್ಯ, ಹೇಮಂತ್, ನಂಜುಂಡಪ್ಪ ಹಾಜರಿದ್ದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

1 hour ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago