ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯೊಂದಿಗೆ ಕ್ರೀಡೆ ಕೂಡ ಅತ್ಯವಶ್ಯಕವಾಗಿದ್ದು, ಮಕ್ಕಳು ಆಟೋಟಗಳಲ್ಲೂ ಹೆಚ್ಚಾಗಿ ಭಾಗವಹಿಸಬೇಕು ಎಂದು ಹಿರಿಯ ದೈಹಿಕ ಶಿಕ್ಷಕ ಶರಣಪ್ಪ ತಿಳಿಸಿದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ವಿದ್ಯಾನಿಧಿ ಕಾಮರ್ಸ್ ಅಂಡ್ ಮ್ಯಾನೇಜ್ ಮೆಂಟ್ ಸ್ಟಡೀಸ್ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಕ್ರೀಡಾ ಕೂಟದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಇತ್ತೀಚೆಗೆ ಅಂಕಗಳಿಗೆ ಮಾತ್ರ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದಾರೆ. ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿಸಲು ಸಹಕಾರಿಯಾಗುತ್ತದೆ. ಇದರಿಂದ ಕ್ರೀಡಾ ಕೂಟಗಳ ಮೂಲಕ ಕ್ರೀಡೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಈ ವೇಳೆ ಮಾತನಾಡಿದ ಪ್ರಾಂಶುಪಾಲರಾದ ದಿನೇಶ್, ಕ್ರೀಡೆಯಲ್ಲಿ ಶಿಕ್ಷಣದೊಂದಿಗೆ ಸಾಧನೆ ಮಾಡಬೇಕು. ಸತತ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಇದರಿಂದ ಕಲಿಕೆಯೊಂದಿಗೆ ಪ್ರತಿದಿನ ಕ್ರೀಡೆಗೆ ಸಮಯ ನೀಡಬೇಕು ಎಂದರು.
ಈ ವೇಳೆ ಎಚ್ ಒಡಿ ವಿಜಯ್ ಕುಮಾರ್ ಡಿ.ಕೆ, ಶಿವಾನಂದ.ಜಿ, ಶ್ರೀಧರ್, ತೇಜಸ್ವಿನಿ, ಕೃಷ್ಣ ಚೈತನ್ಯ, ಹೇಮಂತ್, ನಂಜುಂಡಪ್ಪ ಹಾಜರಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…