ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅವಶ್ಯಕ-ಹಿರಿಯ ದೈಹಿಕ ‌ಶಿಕ್ಷಕ ಶರಣಪ್ಪ

ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯೊಂದಿಗೆ ಕ್ರೀಡೆ ಕೂಡ ಅತ್ಯವಶ್ಯಕವಾಗಿದ್ದು, ಮಕ್ಕಳು ಆಟೋಟಗಳಲ್ಲೂ ಹೆಚ್ಚಾಗಿ ಭಾಗವಹಿಸಬೇಕು ಎಂದು ಹಿರಿಯ ದೈಹಿಕ ‌ಶಿಕ್ಷಕ ಶರಣಪ್ಪ ತಿಳಿಸಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ವಿದ್ಯಾನಿಧಿ ಕಾಮರ್ಸ್ ಅಂಡ್ ಮ್ಯಾನೇಜ್ ಮೆಂಟ್ ಸ್ಟಡೀಸ್ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಕ್ರೀಡಾ ಕೂಟದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಇತ್ತೀಚೆಗೆ ಅಂಕಗಳಿಗೆ ಮಾತ್ರ ಹೆಚ್ಚಿನ ಪ್ರಾಶಸ್ತ್ಯ ‌ನೀಡುತ್ತಿದ್ದಾರೆ. ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕ್ರೀಡೆ ದೈಹಿಕ ಹಾಗೂ ‌ಮಾನಸಿಕ ಆರೋಗ್ಯ ವೃದ್ದಿಸಲು ಸಹಕಾರಿಯಾಗುತ್ತದೆ. ಇದರಿಂದ ಕ್ರೀಡಾ ಕೂಟಗಳ ಮೂಲಕ ಕ್ರೀಡೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಈ ವೇಳೆ ಮಾತನಾಡಿದ ಪ್ರಾಂಶುಪಾಲರಾದ ದಿನೇಶ್, ಕ್ರೀಡೆಯಲ್ಲಿ ಶಿಕ್ಷಣದೊಂದಿಗೆ ಸಾಧನೆ ಮಾಡಬೇಕು. ಸತತ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಇದರಿಂದ ‌ಕಲಿಕೆಯೊಂದಿಗೆ ಪ್ರತಿದಿನ ಕ್ರೀಡೆಗೆ ಸಮಯ ನೀಡಬೇಕು ಎಂದರು.

ಈ ವೇಳೆ ಎಚ್ ಒಡಿ ವಿಜಯ್ ಕುಮಾರ್ ‌ಡಿ.ಕೆ, ಶಿವಾನಂದ.ಜಿ, ಶ್ರೀಧರ್, ತೇಜಸ್ವಿನಿ, ಕೃಷ್ಣ ಚೈತನ್ಯ, ಹೇಮಂತ್, ನಂಜುಂಡಪ್ಪ ಹಾಜರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

6 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago