ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ ನಲುಗಿ ನೀರು, ಊಟ, ವಸತಿ ಹಾಗೂ ಸ್ನಾನ ಇಲ್ಲದೆ ಸುಮಾರು 4-5 ತಿಂಗಳಿಂದ ಚಿಕತ್ಸೆ ಸಿಗದೆ ಅನಾರೋಗ್ಯದಿಂದ ಬಳಲಿದ ವ್ಯಕ್ತಿಯನ್ನು ರಕ್ಷಿಸಿ, ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವೃದ್ಧಾಶ್ರಮಕೆ ದಾಖಲಿಸಿದ ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.
ವ್ಯಕ್ತಿಗೆ ಪುನರ್ವಸತಿ ಕಲ್ಪಿಸಲು ವ್ಯತಿಯೊಂದಿಗೆ ಸುಮಾರು 20 ದಿನಗಳ 8-10 ಗಂಟೆಗಳ ಸಂಭಾಷಣೆ ಹಾಗೂ ಆಪ್ತ ಸಮಾಲೋಚನೆ ನಡೆಸಿ ಮನವೊಲಿಸಲು ಯತ್ನಿಸಿ ಯಶಸ್ಸು ಕಾಣಲಾಯಿತು.
ಸುಮಾರು ನಾಲ್ಕೈದು ತಿಂಗಳಿನಿಂದ ಬೆಂಗಳೂರಿನ ತನ್ನ ಕುಟುಂಬದಿಂದ ದೂರವಾಗಿ ಒಂಟಿಯಾಗಿದ್ದ ಮಾನಸಿಕ ಖಿನ್ನತೆಯ ವ್ಯಕ್ತಿ, ಯಾರಾದರೂ ನೀರು, ಊಟ, ಬ್ರೆಡ್, ಬಿಸ್ಕತ್ ಹಾಗೂ ನೀರಿನ ಬಾಟಲ್ ನ್ನು ಅಕ್ಕ ಪಕ್ಕದ ಮನೆಯವರು, ಗ್ರಾಮಸ್ಥರು ಹಾಗು ರಾಷ್ಟ್ರೀಯ ಹೆದ್ದಾರಿ ದಾರಿ ಹೋಕರು ನೀಡುತ್ತಿದ್ದರು. ಅದೇ ಆತನಗೆ ಆಹಾರದ ಮೂಲವಾಗಿತ್ತು. ನಿರಾಶ್ರಿತ ವ್ಯಕ್ತಿಗೆ ಆಸರೆಯ ಕೈಗಳ ಅವಶ್ಯಕತೆಯೂ ಇತ್ತು.
ಪೋಷಕರು ಅನಾರೋಗ್ಯಕ್ಕೆ ಒಳಗಾದಾಗ ಅವರನ್ನು ಹೊರಹಾಕುವ ಸಂಸ್ಕೃತಿ ಬಾರದ ರೀತಿ. ಎಲ್ಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ಕಡ್ಡಾಯವಾಗಿ ತಿಳಿಸಬೇಕು.
ಈ ರೀತಿಯ ಸಂದರ್ಭಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದಾಗಿದೆ.
ರಕ್ಷಣಾ ಕಾರ್ಯಾದಲ್ಲಿ ಸಹಕಾರಿಯಾದ ಹಾಗು ವ್ಯಕ್ತಿಗೆ ತಾತ್ಕಾಲಿಕ ಪುನರ್ವಸತಿ ದೊರಕಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುಮತಿ ಪಡೆದ ಸಂಸ್ಥೆ ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ, (ವೃದ್ಧಾಶ್ರಮ)ದೊಡ್ಡಬಳ್ಳಾಪುರ ಮುಖ್ಯಸ್ಥರಾದ ಎಂ ಸಿದ್ದಗಂಗಯ್ಯ ರವರಿಗೆ ಧನ್ಯವಾದಗಳು.ಈ ರೀತಿಯ ನಿಸ್ವಾರ್ಥ ಸೇವೆಯ ಸಂಸ್ಥೆಗೆ ಇನ್ನಷ್ಟು ಸೇವೆಯ ಅವಕಾಶ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…