ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯ ರಕ್ಷಣೆ

ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ ನಲುಗಿ ನೀರು, ಊಟ, ವಸತಿ ಹಾಗೂ ಸ್ನಾನ ಇಲ್ಲದೆ ಸುಮಾರು 4-5 ತಿಂಗಳಿಂದ ಚಿಕತ್ಸೆ ಸಿಗದೆ ಅನಾರೋಗ್ಯದಿಂದ ಬಳಲಿದ ವ್ಯಕ್ತಿಯನ್ನು ರಕ್ಷಿಸಿ, ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವೃದ್ಧಾಶ್ರಮಕೆ ದಾಖಲಿಸಿದ ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.

ವ್ಯಕ್ತಿಗೆ ಪುನರ್ವಸತಿ ಕಲ್ಪಿಸಲು ವ್ಯತಿಯೊಂದಿಗೆ ಸುಮಾರು 20 ದಿನಗಳ  8-10 ಗಂಟೆಗಳ ಸಂಭಾಷಣೆ ಹಾಗೂ ಆಪ್ತ ಸಮಾಲೋಚನೆ ನಡೆಸಿ ಮನವೊಲಿಸಲು ಯತ್ನಿಸಿ ಯಶಸ್ಸು  ಕಾಣಲಾಯಿತು.

ಸುಮಾರು ನಾಲ್ಕೈದು ತಿಂಗಳಿನಿಂದ ಬೆಂಗಳೂರಿನ ತನ್ನ ಕುಟುಂಬದಿಂದ ದೂರವಾಗಿ ಒಂಟಿಯಾಗಿದ್ದ ಮಾನಸಿಕ ಖಿನ್ನತೆಯ ವ್ಯಕ್ತಿ, ಯಾರಾದರೂ ನೀರು, ಊಟ, ಬ್ರೆಡ್, ಬಿಸ್ಕತ್ ಹಾಗೂ ನೀರಿನ ಬಾಟಲ್ ನ್ನು ಅಕ್ಕ ಪಕ್ಕದ ಮನೆಯವರು, ಗ್ರಾಮಸ್ಥರು ಹಾಗು ರಾಷ್ಟ್ರೀಯ ಹೆದ್ದಾರಿ ದಾರಿ ಹೋಕರು ನೀಡುತ್ತಿದ್ದರು. ಅದೇ ಆತನಗೆ ಆಹಾರದ ಮೂಲವಾಗಿತ್ತು. ನಿರಾಶ್ರಿತ ವ್ಯಕ್ತಿಗೆ ಆಸರೆಯ ಕೈಗಳ ಅವಶ್ಯಕತೆಯೂ ಇತ್ತು.

ಅನೇಕ ರೀತಿಯ ಮಾನಸಿಕ ಒತ್ತಡದಲ್ಲಿ ನಲುಗಿ ಸೂಕ್ತ ಚಿಕಿತ್ಸೆ ದೊರಕದೆ ಒತ್ತಡ ಖಿನ್ನತೆಯಾಗಿ ಮಾನಸಿಕ ಅಸ್ವಸ್ಥತೆ ಅವರಿಸಿ ಅದೆಷ್ಟೋ ಜನರು ಸಾರ್ವಜನಿಕ ಸ್ಥಳಗಳಲ್ಲಿ ಅಸುರಕ್ಷಿತ ಜೀವನ ನಡೆಸುತ್ತಿದ್ದಾರೆ. ಅವರನ್ನೆಲ್ಲ ರಕ್ಷಿಸುವುದು ಹಾಗು ಸೂಕ್ತ ಸ್ಥಳಕ್ಕೆ ರವಾನಿಸುವುದು ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ಕರ್ತವ್ಯ ಎಂದು ಮಾನಸಿಕ ಆರೋಗ್ಯ ಕಾಯ್ದೆ -2017 ಸ್ಪಷ್ಟಪಡಿಸಿದೆ ಹಾಗೂ ಕುಟುಂಬಸ್ಥರು ಇದ್ದೂ ಅವರನ್ನು ಈ ರೀತಿ ಬಿಡುವುದು ಅಥವಾ ಸೂಕ್ತ ಚಿಕಿತ್ಸೆ ಕೊಡಿಸಲು ಅಸಡ್ಡೆ ತೋರುವುದು ಅಪರಾಧವಾಗಿದೆ.

ಪೋಷಕರು ಅನಾರೋಗ್ಯಕ್ಕೆ ಒಳಗಾದಾಗ ಅವರನ್ನು ಹೊರಹಾಕುವ ಸಂಸ್ಕೃತಿ ಬಾರದ ರೀತಿ. ಎಲ್ಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ಕಡ್ಡಾಯವಾಗಿ ತಿಳಿಸಬೇಕು.

ಈ ರೀತಿಯ ಸಂದರ್ಭಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದಾಗಿದೆ.

ರಕ್ಷಣಾ ಕಾರ್ಯಾದಲ್ಲಿ ಸಹಕಾರಿಯಾದ ಹಾಗು ವ್ಯಕ್ತಿಗೆ ತಾತ್ಕಾಲಿಕ ಪುನರ್ವಸತಿ ದೊರಕಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುಮತಿ ಪಡೆದ ಸಂಸ್ಥೆ ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ, (ವೃದ್ಧಾಶ್ರಮ)ದೊಡ್ಡಬಳ್ಳಾಪುರ ಮುಖ್ಯಸ್ಥರಾದ ಎಂ ಸಿದ್ದಗಂಗಯ್ಯ ರವರಿಗೆ ಧನ್ಯವಾದಗಳು.‌ಈ ರೀತಿಯ ನಿಸ್ವಾರ್ಥ ಸೇವೆಯ ಸಂಸ್ಥೆಗೆ ಇನ್ನಷ್ಟು ಸೇವೆಯ ಅವಕಾಶ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ತಿಳಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

55 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago