ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ ನಲುಗಿ ನೀರು, ಊಟ, ವಸತಿ ಹಾಗೂ ಸ್ನಾನ ಇಲ್ಲದೆ ಸುಮಾರು 4-5 ತಿಂಗಳಿಂದ ಚಿಕತ್ಸೆ ಸಿಗದೆ ಅನಾರೋಗ್ಯದಿಂದ ಬಳಲಿದ ವ್ಯಕ್ತಿಯನ್ನು ರಕ್ಷಿಸಿ, ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವೃದ್ಧಾಶ್ರಮಕೆ ದಾಖಲಿಸಿದ ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.
ವ್ಯಕ್ತಿಗೆ ಪುನರ್ವಸತಿ ಕಲ್ಪಿಸಲು ವ್ಯತಿಯೊಂದಿಗೆ ಸುಮಾರು 20 ದಿನಗಳ 8-10 ಗಂಟೆಗಳ ಸಂಭಾಷಣೆ ಹಾಗೂ ಆಪ್ತ ಸಮಾಲೋಚನೆ ನಡೆಸಿ ಮನವೊಲಿಸಲು ಯತ್ನಿಸಿ ಯಶಸ್ಸು ಕಾಣಲಾಯಿತು.
ಸುಮಾರು ನಾಲ್ಕೈದು ತಿಂಗಳಿನಿಂದ ಬೆಂಗಳೂರಿನ ತನ್ನ ಕುಟುಂಬದಿಂದ ದೂರವಾಗಿ ಒಂಟಿಯಾಗಿದ್ದ ಮಾನಸಿಕ ಖಿನ್ನತೆಯ ವ್ಯಕ್ತಿ, ಯಾರಾದರೂ ನೀರು, ಊಟ, ಬ್ರೆಡ್, ಬಿಸ್ಕತ್ ಹಾಗೂ ನೀರಿನ ಬಾಟಲ್ ನ್ನು ಅಕ್ಕ ಪಕ್ಕದ ಮನೆಯವರು, ಗ್ರಾಮಸ್ಥರು ಹಾಗು ರಾಷ್ಟ್ರೀಯ ಹೆದ್ದಾರಿ ದಾರಿ ಹೋಕರು ನೀಡುತ್ತಿದ್ದರು. ಅದೇ ಆತನಗೆ ಆಹಾರದ ಮೂಲವಾಗಿತ್ತು. ನಿರಾಶ್ರಿತ ವ್ಯಕ್ತಿಗೆ ಆಸರೆಯ ಕೈಗಳ ಅವಶ್ಯಕತೆಯೂ ಇತ್ತು.
ಪೋಷಕರು ಅನಾರೋಗ್ಯಕ್ಕೆ ಒಳಗಾದಾಗ ಅವರನ್ನು ಹೊರಹಾಕುವ ಸಂಸ್ಕೃತಿ ಬಾರದ ರೀತಿ. ಎಲ್ಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ಕಡ್ಡಾಯವಾಗಿ ತಿಳಿಸಬೇಕು.
ಈ ರೀತಿಯ ಸಂದರ್ಭಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದಾಗಿದೆ.
ರಕ್ಷಣಾ ಕಾರ್ಯಾದಲ್ಲಿ ಸಹಕಾರಿಯಾದ ಹಾಗು ವ್ಯಕ್ತಿಗೆ ತಾತ್ಕಾಲಿಕ ಪುನರ್ವಸತಿ ದೊರಕಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುಮತಿ ಪಡೆದ ಸಂಸ್ಥೆ ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ, (ವೃದ್ಧಾಶ್ರಮ)ದೊಡ್ಡಬಳ್ಳಾಪುರ ಮುಖ್ಯಸ್ಥರಾದ ಎಂ ಸಿದ್ದಗಂಗಯ್ಯ ರವರಿಗೆ ಧನ್ಯವಾದಗಳು.ಈ ರೀತಿಯ ನಿಸ್ವಾರ್ಥ ಸೇವೆಯ ಸಂಸ್ಥೆಗೆ ಇನ್ನಷ್ಟು ಸೇವೆಯ ಅವಕಾಶ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ತಿಳಿಸಿದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…