ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ ನಲುಗಿ ನೀರು, ಊಟ, ವಸತಿ ಹಾಗೂ ಸ್ನಾನ ಇಲ್ಲದೆ ಸುಮಾರು 4-5 ತಿಂಗಳಿಂದ ಚಿಕತ್ಸೆ ಸಿಗದೆ ಅನಾರೋಗ್ಯದಿಂದ ಬಳಲಿದ ವ್ಯಕ್ತಿಯನ್ನು ರಕ್ಷಿಸಿ, ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವೃದ್ಧಾಶ್ರಮಕೆ ದಾಖಲಿಸಿದ ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.
ವ್ಯಕ್ತಿಗೆ ಪುನರ್ವಸತಿ ಕಲ್ಪಿಸಲು ವ್ಯತಿಯೊಂದಿಗೆ ಸುಮಾರು 20 ದಿನಗಳ 8-10 ಗಂಟೆಗಳ ಸಂಭಾಷಣೆ ಹಾಗೂ ಆಪ್ತ ಸಮಾಲೋಚನೆ ನಡೆಸಿ ಮನವೊಲಿಸಲು ಯತ್ನಿಸಿ ಯಶಸ್ಸು ಕಾಣಲಾಯಿತು.
ಸುಮಾರು ನಾಲ್ಕೈದು ತಿಂಗಳಿನಿಂದ ಬೆಂಗಳೂರಿನ ತನ್ನ ಕುಟುಂಬದಿಂದ ದೂರವಾಗಿ ಒಂಟಿಯಾಗಿದ್ದ ಮಾನಸಿಕ ಖಿನ್ನತೆಯ ವ್ಯಕ್ತಿ, ಯಾರಾದರೂ ನೀರು, ಊಟ, ಬ್ರೆಡ್, ಬಿಸ್ಕತ್ ಹಾಗೂ ನೀರಿನ ಬಾಟಲ್ ನ್ನು ಅಕ್ಕ ಪಕ್ಕದ ಮನೆಯವರು, ಗ್ರಾಮಸ್ಥರು ಹಾಗು ರಾಷ್ಟ್ರೀಯ ಹೆದ್ದಾರಿ ದಾರಿ ಹೋಕರು ನೀಡುತ್ತಿದ್ದರು. ಅದೇ ಆತನಗೆ ಆಹಾರದ ಮೂಲವಾಗಿತ್ತು. ನಿರಾಶ್ರಿತ ವ್ಯಕ್ತಿಗೆ ಆಸರೆಯ ಕೈಗಳ ಅವಶ್ಯಕತೆಯೂ ಇತ್ತು.
ಪೋಷಕರು ಅನಾರೋಗ್ಯಕ್ಕೆ ಒಳಗಾದಾಗ ಅವರನ್ನು ಹೊರಹಾಕುವ ಸಂಸ್ಕೃತಿ ಬಾರದ ರೀತಿ. ಎಲ್ಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ಕಡ್ಡಾಯವಾಗಿ ತಿಳಿಸಬೇಕು.
ಈ ರೀತಿಯ ಸಂದರ್ಭಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದಾಗಿದೆ.
ರಕ್ಷಣಾ ಕಾರ್ಯಾದಲ್ಲಿ ಸಹಕಾರಿಯಾದ ಹಾಗು ವ್ಯಕ್ತಿಗೆ ತಾತ್ಕಾಲಿಕ ಪುನರ್ವಸತಿ ದೊರಕಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುಮತಿ ಪಡೆದ ಸಂಸ್ಥೆ ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ, (ವೃದ್ಧಾಶ್ರಮ)ದೊಡ್ಡಬಳ್ಳಾಪುರ ಮುಖ್ಯಸ್ಥರಾದ ಎಂ ಸಿದ್ದಗಂಗಯ್ಯ ರವರಿಗೆ ಧನ್ಯವಾದಗಳು.ಈ ರೀತಿಯ ನಿಸ್ವಾರ್ಥ ಸೇವೆಯ ಸಂಸ್ಥೆಗೆ ಇನ್ನಷ್ಟು ಸೇವೆಯ ಅವಕಾಶ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ತಿಳಿಸಿದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…