ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯ ರಕ್ಷಣೆ

ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ ನಲುಗಿ ನೀರು, ಊಟ, ವಸತಿ ಹಾಗೂ ಸ್ನಾನ ಇಲ್ಲದೆ ಸುಮಾರು 4-5 ತಿಂಗಳಿಂದ ಚಿಕತ್ಸೆ ಸಿಗದೆ ಅನಾರೋಗ್ಯದಿಂದ ಬಳಲಿದ ವ್ಯಕ್ತಿಯನ್ನು ರಕ್ಷಿಸಿ, ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವೃದ್ಧಾಶ್ರಮಕೆ ದಾಖಲಿಸಿದ ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.

ವ್ಯಕ್ತಿಗೆ ಪುನರ್ವಸತಿ ಕಲ್ಪಿಸಲು ವ್ಯತಿಯೊಂದಿಗೆ ಸುಮಾರು 20 ದಿನಗಳ  8-10 ಗಂಟೆಗಳ ಸಂಭಾಷಣೆ ಹಾಗೂ ಆಪ್ತ ಸಮಾಲೋಚನೆ ನಡೆಸಿ ಮನವೊಲಿಸಲು ಯತ್ನಿಸಿ ಯಶಸ್ಸು  ಕಾಣಲಾಯಿತು.

ಸುಮಾರು ನಾಲ್ಕೈದು ತಿಂಗಳಿನಿಂದ ಬೆಂಗಳೂರಿನ ತನ್ನ ಕುಟುಂಬದಿಂದ ದೂರವಾಗಿ ಒಂಟಿಯಾಗಿದ್ದ ಮಾನಸಿಕ ಖಿನ್ನತೆಯ ವ್ಯಕ್ತಿ, ಯಾರಾದರೂ ನೀರು, ಊಟ, ಬ್ರೆಡ್, ಬಿಸ್ಕತ್ ಹಾಗೂ ನೀರಿನ ಬಾಟಲ್ ನ್ನು ಅಕ್ಕ ಪಕ್ಕದ ಮನೆಯವರು, ಗ್ರಾಮಸ್ಥರು ಹಾಗು ರಾಷ್ಟ್ರೀಯ ಹೆದ್ದಾರಿ ದಾರಿ ಹೋಕರು ನೀಡುತ್ತಿದ್ದರು. ಅದೇ ಆತನಗೆ ಆಹಾರದ ಮೂಲವಾಗಿತ್ತು. ನಿರಾಶ್ರಿತ ವ್ಯಕ್ತಿಗೆ ಆಸರೆಯ ಕೈಗಳ ಅವಶ್ಯಕತೆಯೂ ಇತ್ತು.

ಅನೇಕ ರೀತಿಯ ಮಾನಸಿಕ ಒತ್ತಡದಲ್ಲಿ ನಲುಗಿ ಸೂಕ್ತ ಚಿಕಿತ್ಸೆ ದೊರಕದೆ ಒತ್ತಡ ಖಿನ್ನತೆಯಾಗಿ ಮಾನಸಿಕ ಅಸ್ವಸ್ಥತೆ ಅವರಿಸಿ ಅದೆಷ್ಟೋ ಜನರು ಸಾರ್ವಜನಿಕ ಸ್ಥಳಗಳಲ್ಲಿ ಅಸುರಕ್ಷಿತ ಜೀವನ ನಡೆಸುತ್ತಿದ್ದಾರೆ. ಅವರನ್ನೆಲ್ಲ ರಕ್ಷಿಸುವುದು ಹಾಗು ಸೂಕ್ತ ಸ್ಥಳಕ್ಕೆ ರವಾನಿಸುವುದು ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ಕರ್ತವ್ಯ ಎಂದು ಮಾನಸಿಕ ಆರೋಗ್ಯ ಕಾಯ್ದೆ -2017 ಸ್ಪಷ್ಟಪಡಿಸಿದೆ ಹಾಗೂ ಕುಟುಂಬಸ್ಥರು ಇದ್ದೂ ಅವರನ್ನು ಈ ರೀತಿ ಬಿಡುವುದು ಅಥವಾ ಸೂಕ್ತ ಚಿಕಿತ್ಸೆ ಕೊಡಿಸಲು ಅಸಡ್ಡೆ ತೋರುವುದು ಅಪರಾಧವಾಗಿದೆ.

ಪೋಷಕರು ಅನಾರೋಗ್ಯಕ್ಕೆ ಒಳಗಾದಾಗ ಅವರನ್ನು ಹೊರಹಾಕುವ ಸಂಸ್ಕೃತಿ ಬಾರದ ರೀತಿ. ಎಲ್ಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ಕಡ್ಡಾಯವಾಗಿ ತಿಳಿಸಬೇಕು.

ಈ ರೀತಿಯ ಸಂದರ್ಭಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದಾಗಿದೆ.

ರಕ್ಷಣಾ ಕಾರ್ಯಾದಲ್ಲಿ ಸಹಕಾರಿಯಾದ ಹಾಗು ವ್ಯಕ್ತಿಗೆ ತಾತ್ಕಾಲಿಕ ಪುನರ್ವಸತಿ ದೊರಕಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುಮತಿ ಪಡೆದ ಸಂಸ್ಥೆ ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ, (ವೃದ್ಧಾಶ್ರಮ)ದೊಡ್ಡಬಳ್ಳಾಪುರ ಮುಖ್ಯಸ್ಥರಾದ ಎಂ ಸಿದ್ದಗಂಗಯ್ಯ ರವರಿಗೆ ಧನ್ಯವಾದಗಳು.‌ಈ ರೀತಿಯ ನಿಸ್ವಾರ್ಥ ಸೇವೆಯ ಸಂಸ್ಥೆಗೆ ಇನ್ನಷ್ಟು ಸೇವೆಯ ಅವಕಾಶ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ತಿಳಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

11 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

20 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

21 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago