ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ ನಲುಗಿ ನೀರು, ಊಟ, ವಸತಿ ಹಾಗೂ ಸ್ನಾನ ಇಲ್ಲದೆ ಸುಮಾರು 4-5 ತಿಂಗಳಿಂದ ಚಿಕತ್ಸೆ ಸಿಗದೆ ಅನಾರೋಗ್ಯದಿಂದ ಬಳಲಿದ ವ್ಯಕ್ತಿಯನ್ನು ರಕ್ಷಿಸಿ, ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ ವೃದ್ಧಾಶ್ರಮಕೆ ದಾಖಲಿಸಿದ ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ.
ವ್ಯಕ್ತಿಗೆ ಪುನರ್ವಸತಿ ಕಲ್ಪಿಸಲು ವ್ಯತಿಯೊಂದಿಗೆ ಸುಮಾರು 20 ದಿನಗಳ 8-10 ಗಂಟೆಗಳ ಸಂಭಾಷಣೆ ಹಾಗೂ ಆಪ್ತ ಸಮಾಲೋಚನೆ ನಡೆಸಿ ಮನವೊಲಿಸಲು ಯತ್ನಿಸಿ ಯಶಸ್ಸು ಕಾಣಲಾಯಿತು.
ಸುಮಾರು ನಾಲ್ಕೈದು ತಿಂಗಳಿನಿಂದ ಬೆಂಗಳೂರಿನ ತನ್ನ ಕುಟುಂಬದಿಂದ ದೂರವಾಗಿ ಒಂಟಿಯಾಗಿದ್ದ ಮಾನಸಿಕ ಖಿನ್ನತೆಯ ವ್ಯಕ್ತಿ, ಯಾರಾದರೂ ನೀರು, ಊಟ, ಬ್ರೆಡ್, ಬಿಸ್ಕತ್ ಹಾಗೂ ನೀರಿನ ಬಾಟಲ್ ನ್ನು ಅಕ್ಕ ಪಕ್ಕದ ಮನೆಯವರು, ಗ್ರಾಮಸ್ಥರು ಹಾಗು ರಾಷ್ಟ್ರೀಯ ಹೆದ್ದಾರಿ ದಾರಿ ಹೋಕರು ನೀಡುತ್ತಿದ್ದರು. ಅದೇ ಆತನಗೆ ಆಹಾರದ ಮೂಲವಾಗಿತ್ತು. ನಿರಾಶ್ರಿತ ವ್ಯಕ್ತಿಗೆ ಆಸರೆಯ ಕೈಗಳ ಅವಶ್ಯಕತೆಯೂ ಇತ್ತು.
ಪೋಷಕರು ಅನಾರೋಗ್ಯಕ್ಕೆ ಒಳಗಾದಾಗ ಅವರನ್ನು ಹೊರಹಾಕುವ ಸಂಸ್ಕೃತಿ ಬಾರದ ರೀತಿ. ಎಲ್ಲಾ ಮಕ್ಕಳಿಗೆ ಮೌಲ್ಯ ಶಿಕ್ಷಣ ಕಡ್ಡಾಯವಾಗಿ ತಿಳಿಸಬೇಕು.
ಈ ರೀತಿಯ ಸಂದರ್ಭಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡಬಹುದಾಗಿದೆ.
ರಕ್ಷಣಾ ಕಾರ್ಯಾದಲ್ಲಿ ಸಹಕಾರಿಯಾದ ಹಾಗು ವ್ಯಕ್ತಿಗೆ ತಾತ್ಕಾಲಿಕ ಪುನರ್ವಸತಿ ದೊರಕಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುಮತಿ ಪಡೆದ ಸಂಸ್ಥೆ ಪವಿತ್ರ ರೂರಲ್ ಡೆವಲಪ್ಮೆಂಟ್ ಸಂಸ್ಥೆ, (ವೃದ್ಧಾಶ್ರಮ)ದೊಡ್ಡಬಳ್ಳಾಪುರ ಮುಖ್ಯಸ್ಥರಾದ ಎಂ ಸಿದ್ದಗಂಗಯ್ಯ ರವರಿಗೆ ಧನ್ಯವಾದಗಳು.ಈ ರೀತಿಯ ನಿಸ್ವಾರ್ಥ ಸೇವೆಯ ಸಂಸ್ಥೆಗೆ ಇನ್ನಷ್ಟು ಸೇವೆಯ ಅವಕಾಶ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಜಗದೀಶ ಎನ್ ಎಂ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ. ಚಿಕ್ಕಬಳ್ಳಾಪುರ ಹಾಗೂ ಪ್ರಭಾರ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರು ತಿಳಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…