ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಆರ್.ಲತಾ

ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ‌ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಸರ್ಕಾರಿ ನೌಕರರಿಗೆ ಇಂದಿನ ಪರಿಸ್ಥಿತಿಯಲ್ಲಿ ಕ್ರೀಡಾಕೂಟಗಳೂ ಅತ್ಯಗತ್ಯ. ಕಳೆದ ಎರಡು ವರ್ಷ ಕೊರೋನಾ ಸಂಕಷ್ಟಕಾಲದಲ್ಲಿ ಜನರನ್ನು ಮನೆಯಲ್ಲಿರಿಸಿ ಸರ್ಕಾರಿ ನೌಕರರು ಸಾರ್ವಜನಿಕರ ರಕ್ಷಣೆಗೆ ನಿಂತು ಸೇವೆ ಸಲ್ಲಿಸಿದ್ದಾರೆ.

ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದೂ ಈ ಚುನಾವಣೆಗೆ ಕಾರ್ಯದಲ್ಲಿ ಸರ್ಕಾರಿ ನೌಕರರ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಮಾತ್ರವಲ್ಲದೇ ಸರ್ಕಾರದ ಯಾವುದೇ ಸರ್ವೆ, ಸಭೆ, ಸಮಾರಂಭಗಳಾದರೂ ಸಂಪೂರ್ಣ ಹೊಣೆ ಸರ್ಕಾರಿ ನೌಕರರಾದ ನಮ್ಮದೇ ಆಗಿರುತ್ತದೆ. ಇಂತಹ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು, ಉತ್ಸಾಹದಿಂದ ಕೆಲಸ ನಿರ್ವಹಿಸಲು ಕ್ರೀಡೆಗಳು ಸಹಕಾರಿ ಎಂದರು.

ಯಾವುದೇ ಕೆಲಸ ನಿರ್ವಹಿಸುವಾಗ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಅತ್ಯಂತ ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಸಿಬ್ಬಂದಿಗಳು ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯ ಕುರಿತು ತಮ್ಮ ಬಾಲ್ಯದ ನೆನಪುಗಳನ್ನು ತಿಳಿಸುತ್ತಾ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದರಲ್ಲದೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ, ಯಶಸ್ವಿಗೆ ಹಾರೈಸಿದರು.

ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು ಹಾಗೂ ತ್ರಿ-ವರ್ಣ ಬಣ್ಣದ ಬಲೂನ್‌ಗಳನ್ನು ಆಕಾಶದೆಡೆಗೆ ಹಾರಿಬಿಡಲಾಯಿತು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರು ಸ್ವಾಗತಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

25 minutes ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

21 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

24 hours ago