ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಆರ್.ಲತಾ

ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ‌ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಸರ್ಕಾರಿ ನೌಕರರಿಗೆ ಇಂದಿನ ಪರಿಸ್ಥಿತಿಯಲ್ಲಿ ಕ್ರೀಡಾಕೂಟಗಳೂ ಅತ್ಯಗತ್ಯ. ಕಳೆದ ಎರಡು ವರ್ಷ ಕೊರೋನಾ ಸಂಕಷ್ಟಕಾಲದಲ್ಲಿ ಜನರನ್ನು ಮನೆಯಲ್ಲಿರಿಸಿ ಸರ್ಕಾರಿ ನೌಕರರು ಸಾರ್ವಜನಿಕರ ರಕ್ಷಣೆಗೆ ನಿಂತು ಸೇವೆ ಸಲ್ಲಿಸಿದ್ದಾರೆ.

ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದೂ ಈ ಚುನಾವಣೆಗೆ ಕಾರ್ಯದಲ್ಲಿ ಸರ್ಕಾರಿ ನೌಕರರ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಮಾತ್ರವಲ್ಲದೇ ಸರ್ಕಾರದ ಯಾವುದೇ ಸರ್ವೆ, ಸಭೆ, ಸಮಾರಂಭಗಳಾದರೂ ಸಂಪೂರ್ಣ ಹೊಣೆ ಸರ್ಕಾರಿ ನೌಕರರಾದ ನಮ್ಮದೇ ಆಗಿರುತ್ತದೆ. ಇಂತಹ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು, ಉತ್ಸಾಹದಿಂದ ಕೆಲಸ ನಿರ್ವಹಿಸಲು ಕ್ರೀಡೆಗಳು ಸಹಕಾರಿ ಎಂದರು.

ಯಾವುದೇ ಕೆಲಸ ನಿರ್ವಹಿಸುವಾಗ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಅತ್ಯಂತ ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಸಿಬ್ಬಂದಿಗಳು ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯ ಕುರಿತು ತಮ್ಮ ಬಾಲ್ಯದ ನೆನಪುಗಳನ್ನು ತಿಳಿಸುತ್ತಾ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದರಲ್ಲದೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ, ಯಶಸ್ವಿಗೆ ಹಾರೈಸಿದರು.

ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು ಹಾಗೂ ತ್ರಿ-ವರ್ಣ ಬಣ್ಣದ ಬಲೂನ್‌ಗಳನ್ನು ಆಕಾಶದೆಡೆಗೆ ಹಾರಿಬಿಡಲಾಯಿತು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರು ಸ್ವಾಗತಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago