ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದೂ ಈ ಚುನಾವಣೆಗೆ ಕಾರ್ಯದಲ್ಲಿ ಸರ್ಕಾರಿ ನೌಕರರ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಮಾತ್ರವಲ್ಲದೇ ಸರ್ಕಾರದ ಯಾವುದೇ ಸರ್ವೆ, ಸಭೆ, ಸಮಾರಂಭಗಳಾದರೂ ಸಂಪೂರ್ಣ ಹೊಣೆ ಸರ್ಕಾರಿ ನೌಕರರಾದ ನಮ್ಮದೇ ಆಗಿರುತ್ತದೆ. ಇಂತಹ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು, ಉತ್ಸಾಹದಿಂದ ಕೆಲಸ ನಿರ್ವಹಿಸಲು ಕ್ರೀಡೆಗಳು ಸಹಕಾರಿ ಎಂದರು.
ಯಾವುದೇ ಕೆಲಸ ನಿರ್ವಹಿಸುವಾಗ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಅತ್ಯಂತ ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಸಿಬ್ಬಂದಿಗಳು ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.
ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯ ಕುರಿತು ತಮ್ಮ ಬಾಲ್ಯದ ನೆನಪುಗಳನ್ನು ತಿಳಿಸುತ್ತಾ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದರಲ್ಲದೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ, ಯಶಸ್ವಿಗೆ ಹಾರೈಸಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರು ಸ್ವಾಗತಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…