ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಆರ್.ಲತಾ

ಸರ್ಕಾರಿ ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ‌ಸದೃಢತೆಗೆ ಸಹಕಾರಿಯಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2022-23″ರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಸರ್ಕಾರಿ ನೌಕರರಿಗೆ ಇಂದಿನ ಪರಿಸ್ಥಿತಿಯಲ್ಲಿ ಕ್ರೀಡಾಕೂಟಗಳೂ ಅತ್ಯಗತ್ಯ. ಕಳೆದ ಎರಡು ವರ್ಷ ಕೊರೋನಾ ಸಂಕಷ್ಟಕಾಲದಲ್ಲಿ ಜನರನ್ನು ಮನೆಯಲ್ಲಿರಿಸಿ ಸರ್ಕಾರಿ ನೌಕರರು ಸಾರ್ವಜನಿಕರ ರಕ್ಷಣೆಗೆ ನಿಂತು ಸೇವೆ ಸಲ್ಲಿಸಿದ್ದಾರೆ.

ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದ್ದೂ ಈ ಚುನಾವಣೆಗೆ ಕಾರ್ಯದಲ್ಲಿ ಸರ್ಕಾರಿ ನೌಕರರ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಮಾತ್ರವಲ್ಲದೇ ಸರ್ಕಾರದ ಯಾವುದೇ ಸರ್ವೆ, ಸಭೆ, ಸಮಾರಂಭಗಳಾದರೂ ಸಂಪೂರ್ಣ ಹೊಣೆ ಸರ್ಕಾರಿ ನೌಕರರಾದ ನಮ್ಮದೇ ಆಗಿರುತ್ತದೆ. ಇಂತಹ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು, ಉತ್ಸಾಹದಿಂದ ಕೆಲಸ ನಿರ್ವಹಿಸಲು ಕ್ರೀಡೆಗಳು ಸಹಕಾರಿ ಎಂದರು.

ಯಾವುದೇ ಕೆಲಸ ನಿರ್ವಹಿಸುವಾಗ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಅತ್ಯಂತ ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಸಿಬ್ಬಂದಿಗಳು ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.

ಜಿಲ್ಲೆಯ ಸರ್ಕಾರಿ ನೌಕರರು ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯ ಕುರಿತು ತಮ್ಮ ಬಾಲ್ಯದ ನೆನಪುಗಳನ್ನು ತಿಳಿಸುತ್ತಾ, ನಾಲ್ಕು ತಾಲ್ಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದರಲ್ಲದೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ, ಯಶಸ್ವಿಗೆ ಹಾರೈಸಿದರು.

ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು ಹಾಗೂ ತ್ರಿ-ವರ್ಣ ಬಣ್ಣದ ಬಲೂನ್‌ಗಳನ್ನು ಆಕಾಶದೆಡೆಗೆ ಹಾರಿಬಿಡಲಾಯಿತು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಅವರು ಸ್ವಾಗತಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ ಸೇರಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದಾಧಿಕಾರಿಗಳು, ನಾಲ್ಕು ತಾಲ್ಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago