Categories: ಲೇಖನ

ಮಾನ ಮತ್ತು ಪ್ರಾಣ, ಇವೆರಡರಲ್ಲಿ ಯಾವುದು ಮುಖ್ಯ ಮತ್ತು ಅನಿವಾರ್ಯ….

ಮಾನ – ಪ್ರಾಣ………..

ಮಾನ ಮರ್ಯಾದೆ ಉಳಿಸಿಕೊಳ್ಳಲು ‌ಪ್ರಾಣ ಬಿಡಬೇಕೆ ?
ಪ್ರಾಣ ಉಳಿಸಿಕೊಳ್ಳಲು ಮಾನ ಮರ್ಯಾದೆ ಬಿಡಬೇಕೆ‌ ?……

ಮಾನ ಮತ್ತು ಪ್ರಾಣ,
ಇವೆರಡರಲ್ಲಿ ಯಾವುದು ಮುಖ್ಯ ಮತ್ತು ಅನಿವಾರ್ಯವಾದಾಗ ಯಾವುದರ ರಕ್ಷಣೆಗೆ ನಾವು ಮಹತ್ವ ಕೊಡಬೇಕು. ಯಾವುದಕ್ಕಾಗಿ ನಾವು ಹೋರಾಡಬೇಕು………………..

ಎಲ್ಲರಿಗೂ ತಿಳಿದಿರುವಂತೆ ಹಿಂದಿನ ಕಾಲದಲ್ಲಿ ಮತ್ತು ಇಂದಿಗೂ ಜನಮಾನಸದಲ್ಲಿ ಮಾನಕ್ಕೆ ಅತ್ಯಂತ ಹೆಚ್ಚಿನ ಮಹತ್ವವಿದೆ. ಪ್ರಾಣ ಹೋದರೂ ಮಾನ ಕಾಪಾಡಿಕೊಳ್ಳಬೇಕು ಎಂಬ ಬಲವಾದ ನಂಬಿಕೆ ಇದೆ.
ಇದು ನಿಜವೇ ? ಸರಿಯೇ ? ಇಂದಿನ ಆಧುನಿಕ ಸಂಕೀರ್ಣ ಬದುಕಿನಲ್ಲೂ ಇದು ಪ್ರಸ್ತುತವೇ ?
ಒಮ್ಮೆ ಅವಲೋಕನ ಮಾಡಿಕೊಳ್ಳೋಣ……….

ಮಾನ ಎಂಬುದು ಭಾವ – ಭ್ರಮೆ – ನಂಬಿಕೆ – ಮಾನಸಿಕ ಸ್ಥಿತಿ.‌‌ ಪ್ರಾಣ ಎಂಬುದು ವಾಸ್ತವ ಮತ್ತು ದೈಹಿಕ ಸ್ಥಿತಿ.

ಇಂದಿನ‌ ಆಧುನಿಕ – ಸ್ಪರ್ಧಾತ್ಮಕ ಭಾರತೀಯ ಸಮಾಜ ಮತ್ತು ಮನಸ್ಥಿತಿಯಲ್ಲಿ ಮಾನ ಎಂಬುದು ತನ್ನ ನೈಜ ಅರ್ಥ ಮತ್ತು ಗುಣವನ್ನು ಕಳೆದುಕೊಂಡಿದೆ ಎನ್ನಬಹುದು. ಮಾನ ಒಂದು ವ್ಯಕ್ತಿತ್ವವನ್ನು ನಿರ್ಧರಿಸುವ ಮಾನದಂಡವಾಗಿ ಉಳಿದಿಲ್ಲ. ಅದನ್ನು ಕಳೆದುಕೊಳ್ಳಬಹುದು ಮತ್ತು ಗಳಿಸಿಕೊಳ್ಳಬಹುದು.

ಒಂದು ವೇಳೆ ಯಾವುದೋ ಕಾರಣದಿಂದ ನಿಮ್ಮ ಮಾನಹಾನಿಯಾಗಿದ್ದರೆ ಮುಂದೆ ಪ್ರತಿಭೆ, ಸಾಮರ್ಥ್ಯ, ದಿಟ್ಟತನ, ಆತ್ಮ ವಿಮರ್ಶೆ‌, ಸಾಧನೆ ‌ಅಥವಾ ಹಣ, ಅಧಿಕಾರ, ಭಂಡತನ, ನಿರ್ಲಜ್ಜೆ, ವಿತಂಡ ಸಮರ್ಥನೆ, ಜನರನ್ನು ಮರುಳು ಮಾಡುವಿಕೆ ಮುಂತಾದ ಕ್ರಮಗಳ ಮುಖಾಂತರ ಅದನ್ನು ಮೇಲ್ನೋಟಕ್ಕಾದರೂ ಮರಳಿ ಪಡೆಯಬಹುದು. ಕೊಲೆ, ಅತ್ಯಾಚಾರ, ಭ್ರಷ್ಟಾಚಾರ ಮುಂತಾದ ಗಂಭೀರ ಪ್ರಕರಣಗಳಲ್ಲಿ ನೇರ ಸಿಕ್ಕಿ ಹಾಕಿಕೊಂಡು ಜೈಲುವಾಸ ಅನುಭವಿಸಿ ಬಂದ ನಂತರವೂ ಹಣಬಲ, ಜಾತಿಬಲ, ಅಧಿಕಾರಬಲ ಇರುವವನು ಮಾನ ಮರ್ಯಾದೆಯೂ ಸೇರಿದಂತೆ ಎಲ್ಲವನ್ನೂ ಮರಳಿ ಗಳಿಸಬಹುದು ಮತ್ತು ಗಳಿಸುತ್ತಿದ್ದಾರೆ. ಅದಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ.

ಅಷ್ಟೇ ಏಕೆ ಸಾಮಾನ್ಯರು ಕೂಡ ಆಕಸ್ಮಿಕವಾಗಿ – ಅನಿವಾರ್ಯವಾಗಿ – ಪರಿಸ್ಥಿತಿಯ ಒತ್ತಡದಿಂದ ಒಂದು ವೇಳೆ ತಪ್ಪುಮಾಡಿ ಅವಮಾನಕ್ಕೆ ಗುರಿಯಾದರೂ ಮುಂದೊಂದು ದಿನ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಂಡು ಮಾನವೀಯ ಅಂತಃಕರಣದಿಂದ ಸಮಾಜಮುಖಿ ಕೆಲಸಗಳನ್ನು ಮಾಡಿದರೆ ಹೋದ ಮಾನವನ್ನು ಸ್ವಲ್ಪಮಟ್ಟಿಗೆ ಮರಳಿ ಪಡೆಯಬಹುದು. ( ಅತ್ಯಂತ ಹುಟ್ಟಾ ಕ್ರಿಮಿನಲ್ ಗಳಿಗೆ ಇದು ಯಾವ ಕಾರಣಕ್ಕೂ ಅನ್ವಯಿಸುವುದಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಮತ್ತೆ ಮತ್ತೆ ಅದೇ ತಪ್ಪು ಮಾಡುವ ಕಿರಾತಕ ಮನೋಭಾವದವರನ್ನು ಈ ಲೇಖನದಿಂದ ಹೊರಗಿಡಲಾಗಿದೆ‌. ಸಾಮಾನ್ಯರ ಸಹಜ ಪರಿಸ್ಥಿತಿಯಲ್ಲಿ ಮಾತ್ರ ಇದನ್ನು ಪರಿಗಣಿಸಬೇಕು.)

ಅದರೆ ಪ್ರಾಣವನ್ನು ಒಮ್ಮೆ ಕಳೆದುಕೊಂಡರೆ ಮತ್ತೆಂದೂ ಅದನ್ನು ಗಳಿಸಲು ಸಾಧ್ಯವಿಲ್ಲ. ಅದೊಂದು ಅತ್ಯಮೂಲ್ಯ ಮತ್ತು ಪ್ರಕೃತಿಯ ವರ. ಅದನ್ನು ಕಾಪಾಡಿಕೊಳ್ಳುವುದೇ ನಮಗೆ ಬಹುಮುಖ್ಯ ಆದ್ಯತೆಯಾಗಬೇಕು. ಪ್ರಾಣ‌ ಇದ್ದರೆ ಮಾತ್ರ ‌ಉಳಿದದ್ದೆಲ್ಲಾ ಲೆಕ್ಕಕ್ಕೆ ಬರುತ್ತದೆ.

ಆದ್ದರಿಂದ,
ಪ್ರೀತಿಗಾಗಿ – ಕೌಟುಂಬಿಕ ಕಾರಣಗಳಿಗಾಗಿ – ಹಣಕಾಸಿನ ನಷ್ಟದಿಂದಾಗಿ ಅಥವಾ ಮತ್ಯಾವುದೇ ಕಾರಣದಿಂದಾಗಿ ನಿಮಗೆ ಅವಮಾನವಾಗಿ ಸಹಿಸಲಾಸಾಧ್ಯವಾದರೂ ಸಹ ಆತ್ಮಹತ್ಯೆ ಅಥವಾ ಕೊಲೆ ಮಾಡುವಂತ ಯಾವ ಜೀವಹಾನಿಯ ಕ್ರಮಗಳನ್ನೂ ಕೈಗೊಳ್ಳಬೇಡಿ.

” ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ ”
ಜೀವವಿದ್ದರೆ ಎಲ್ಲವನ್ನೂ ಮರಳಿ ಪಡೆಯಬಹುದು.
ಅಂತಿಮವಾಗಿ ನನ್ನ ದೃಷ್ಟಿಯಲ್ಲಿ ಮಾನಕ್ಕಿಂತ ಪ್ರಾಣವೇ ಮುಖ್ಯ.

ಆದರೆ ಇದು ಅಪರಾಧವೆಸಗಲು ಸಿಕ್ಕ ಅನುಮತಿಯೆಂದು ಭಾವಿಸಬಾರದು. ಪರಿಸ್ಥಿತಿಯ ಒತ್ತಡದ ನಾಗರಿಕ ಪ್ರಜ್ಞೆ ಜಾಗೃತರಾಗಿರುವವರಿಗೆ ಮಾತ್ರ ಇದು ಅನ್ವಯ………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

45 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

12 hours ago