ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ.
ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಸಮೀಪ ನಡುರಸ್ತೆಯಲ್ಲೇ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು, ಬಳಿಕ ಶವವನ್ನು ರಸ್ತೆಬದಿಯಲ್ಲಿ ಸುಟ್ಟುಹಾಕಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಹತ್ಯೆಗೀಡಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಕೆಲಸದ ನಿಮಿತ್ತ ಬೀದರ್ನಲ್ಲಿ ವಾಸವಾಗಿದ್ದ ಅವರು, ವಾರಕ್ಕೊಮ್ಮೆ ಕಲಬುರಗಿಯಲ್ಲಿರುವ ಮನೆಗೆ ಆಗಮಿಸುತ್ತಿದ್ದರು.
ಘಟನೆಯ ದಿನ ಕಲಬುರಗಿಯಿಂದ ಬೀದರ್ ಕಡೆ ಪ್ರಯಾಣಿಸುತ್ತಿದ್ದ ವೇಳೆ, ಕಮಲಾಪುರದ ಕಲ್ಮೂಡ ಗ್ರಾಮದ ಬಳಿ ದುಷ್ಕರ್ಮಿಗಳ ಕೈಗೆ ಸಿಕ್ಕಿದ್ದಾರೆ ಎನ್ನಲಾಗುತ್ತಿದೆ. ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ, ಗುರುತು ಸಿಗದಂತೆ ಮಾಡಲು ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಸದ್ಯ ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…