ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ.

ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಸಮೀಪ ನಡುರಸ್ತೆಯಲ್ಲೇ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು, ಬಳಿಕ ಶವವನ್ನು ರಸ್ತೆಬದಿಯಲ್ಲಿ ಸುಟ್ಟುಹಾಕಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಹತ್ಯೆಗೀಡಾದ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂಜರಖೇಡ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಕೆಲಸದ ನಿಮಿತ್ತ ಬೀದರ್‌ನಲ್ಲಿ ವಾಸವಾಗಿದ್ದ ಅವರು, ವಾರಕ್ಕೊಮ್ಮೆ ಕಲಬುರಗಿಯಲ್ಲಿರುವ ಮನೆಗೆ ಆಗಮಿಸುತ್ತಿದ್ದರು.

ಘಟನೆಯ ದಿನ ಕಲಬುರಗಿಯಿಂದ ಬೀದರ್ ಕಡೆ ಪ್ರಯಾಣಿಸುತ್ತಿದ್ದ ವೇಳೆ, ಕಮಲಾಪುರದ ಕಲ್ಮೂಡ ಗ್ರಾಮದ ಬಳಿ ದುಷ್ಕರ್ಮಿಗಳ ಕೈಗೆ ಸಿಕ್ಕಿದ್ದಾರೆ ಎನ್ನಲಾಗುತ್ತಿದೆ. ಹಲ್ಲೆ ನಡೆಸಿ ಕೊಲೆ ಮಾಡಿದ ಬಳಿಕ, ಗುರುತು ಸಿಗದಂತೆ ಮಾಡಲು ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಸದ್ಯ ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಕೊಳಚೆ ನೀರು ಶುದ್ಧೀಕರಣಕ್ಕೆ STP ಘಟಕ ಸ್ಥಾಪನೆಗೆ ಆಗ್ರಹ: ಆ.15ರಂದು ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ

ದೊಡ್ಡಬಳ್ಳಾಪುರ: ನಗರದಿಂದ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಎಸ್‌ಟಿಪಿ (STP) ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ…

1 hour ago

ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…

7 hours ago

ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…

7 hours ago

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

19 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

24 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

1 day ago