ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿ ಗ್ರಾಮದ ಮಾರಮ್ಮ ದೇವಿಯ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ದೇವಿ ವಿಗ್ರಹ ಕೊರಳಲಿದ್ದ ತಾಳಿ, ಲಕ್ಷಾಂತರ ಹಣವಿದ್ದ 2 ಹುಂಡಿಗಳನ್ನು ಕದ್ದು, ಸಿ ಸಿ ಕ್ಯಾಮೆರಾದ ಡಿವಿಆರ್ ಸಹ ಕದ್ದು ಪರಾರಿಯಾಗಿದ್ದಾರೆ.
ಸಾವಿರಾರು ಭಕ್ತರನ್ನು ಹೊಂದಿರುವ ಈ ಮಾರಮ್ಮ ದೇವಿಯ ದೇವಸ್ಥಾನ ಕಳೆದ 4 ತಿಂಗಳ ಹಿಂದಷ್ಟೆ 45 ಲಕ್ಷ ರೂ.ಗಳ ವೆಚ್ಚದಲ್ಲಿ ಮರು ನಿರ್ಮಾಣವಾಗಿದ್ದು, ಅದ್ದೂರಿ ಜೀರ್ಣೋದ್ಧಾರದ ಜೊತೆಗೆ ದೇವಿಯ ಜಾತ್ರೆ ಸಹ ನಡೆದಿತ್ತು.
ಜಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿದ್ದ ಹಿನ್ನೆಲೆ ಎರಡೂ ಹುಂಡಿಗಳಲ್ಲಿ ಲಕ್ಷಾಂತರ ಹಣ ಸಂಗ್ರಹವಾಗಿತ್ತು ಎನ್ನಲಾಗಿದೆ.
ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿರುವುದು ಭಕ್ತರು ಹಾಗೂ ಸೋಲದೇವನಹಳ್ಳಿ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರಾಜೀವ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…