ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿ ಗ್ರಾಮದ ಮಾರಮ್ಮ ದೇವಿಯ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ದೇವಿ ವಿಗ್ರಹ ಕೊರಳಲಿದ್ದ ತಾಳಿ, ಲಕ್ಷಾಂತರ ಹಣವಿದ್ದ 2 ಹುಂಡಿಗಳನ್ನು ಕದ್ದು, ಸಿ ಸಿ ಕ್ಯಾಮೆರಾದ ಡಿವಿಆರ್ ಸಹ ಕದ್ದು ಪರಾರಿಯಾಗಿದ್ದಾರೆ.
ಸಾವಿರಾರು ಭಕ್ತರನ್ನು ಹೊಂದಿರುವ ಈ ಮಾರಮ್ಮ ದೇವಿಯ ದೇವಸ್ಥಾನ ಕಳೆದ 4 ತಿಂಗಳ ಹಿಂದಷ್ಟೆ 45 ಲಕ್ಷ ರೂ.ಗಳ ವೆಚ್ಚದಲ್ಲಿ ಮರು ನಿರ್ಮಾಣವಾಗಿದ್ದು, ಅದ್ದೂರಿ ಜೀರ್ಣೋದ್ಧಾರದ ಜೊತೆಗೆ ದೇವಿಯ ಜಾತ್ರೆ ಸಹ ನಡೆದಿತ್ತು.
ಜಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿದ್ದ ಹಿನ್ನೆಲೆ ಎರಡೂ ಹುಂಡಿಗಳಲ್ಲಿ ಲಕ್ಷಾಂತರ ಹಣ ಸಂಗ್ರಹವಾಗಿತ್ತು ಎನ್ನಲಾಗಿದೆ.
ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿರುವುದು ಭಕ್ತರು ಹಾಗೂ ಸೋಲದೇವನಹಳ್ಳಿ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ರಾಜೀವ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…