ಮಾವಿನ ಹಣ್ಣುಗಳನ್ನು ರಾಸಾಯನಿಕಗಳಿಂದ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.
ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ಸುಲ್ತಾನ್ ಬಜಾರ್ ಪೊಲೀಸರೊಂದಿಗೆ ನ್ಯೂ ಲಿಬರ್ಟಿ ಹಣ್ಣಿನ ಅಂಗಡಿ ಮತ್ತು ಹೈದರಾಬಾದ್ನ ಗಡಿಯಾರ ಗೋಪುರದ ಎದುರು ಮೊಅಜ್ಜಮ್ ಜಾಹಿ ಮಾರ್ಕೆಟ್ನಲ್ಲಿರುವ ಲಕ್ಕಿ ಎಂಬ ಹೆಸರಿನ ಎರಡು ಹಣ್ಣಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇರ್ಫಾನ್ ಖಾನ್ ಮತ್ತು ಮೊಹಮ್ಮದ್ ಹುಸೇನ್ ಬಂಧಿತ ಆರೋಪಿಗಳು.
ಮಾವಿನ ಹಣ್ಣುಗಳನ್ನು ಹಣ್ಣಾಗಿಸಲು ಕೃತಕವಾಗಿ ಮಾಗಿಸುವ ವಿಧಾನದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಮಾವಿನ ಹಣ್ಣುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಸ್ತುತ ಪವಿತ್ರ ರಂಜಾನ್ ಮತ್ತು ಮದುವೆ ಸಭೆ ಸಮಾರಂಭಗಳಲ್ಲಿ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ, ಈ ಹಣ್ಣಿನ ಮಾರಾಟಗಾರರು ಪರಿಪಕ್ವವಾಗದ ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಎಫ್ಎಸ್ಎಸ್ಎಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಎಥಿಲೀನ್ನಂತಹ ರಾಸಾಯನಿಕ ಬಳಸಿ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ .
ಕೃತಕವಾಗಿ ಮಾಗಿದ ಹಣ್ಣನ್ನು ತಿಂದರೆ ಉಸಿರಾಟ ತೊಂದರೆ ಮತ್ತು ಚರ್ಮದ ಕಾಯಿಲೆ ಸೇರಿದಂತೆ ಇತರೆ ಕಾಯಿಲೆಗಳು ಬಂದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಆರೋಪಿಗಳು ತಮ್ಮ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಹಾನಿಕಾರಕ ರಾಸಾಯನಿಕಗಳನ್ನು ಅಕ್ರಮವಾಗಿ ಬಳಸುತ್ತಿದ್ದಾರೆ ಮತ್ತು ಅಮಾಯಕ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ ಮತ್ತು FSSAI ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…