ಮಾವಿನ ಹಣ್ಣುಗಳನ್ನು ರಾಸಾಯನಿಕಗಳಿಂದ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.
ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ಸುಲ್ತಾನ್ ಬಜಾರ್ ಪೊಲೀಸರೊಂದಿಗೆ ನ್ಯೂ ಲಿಬರ್ಟಿ ಹಣ್ಣಿನ ಅಂಗಡಿ ಮತ್ತು ಹೈದರಾಬಾದ್ನ ಗಡಿಯಾರ ಗೋಪುರದ ಎದುರು ಮೊಅಜ್ಜಮ್ ಜಾಹಿ ಮಾರ್ಕೆಟ್ನಲ್ಲಿರುವ ಲಕ್ಕಿ ಎಂಬ ಹೆಸರಿನ ಎರಡು ಹಣ್ಣಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇರ್ಫಾನ್ ಖಾನ್ ಮತ್ತು ಮೊಹಮ್ಮದ್ ಹುಸೇನ್ ಬಂಧಿತ ಆರೋಪಿಗಳು.
ಮಾವಿನ ಹಣ್ಣುಗಳನ್ನು ಹಣ್ಣಾಗಿಸಲು ಕೃತಕವಾಗಿ ಮಾಗಿಸುವ ವಿಧಾನದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಮಾವಿನ ಹಣ್ಣುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಸ್ತುತ ಪವಿತ್ರ ರಂಜಾನ್ ಮತ್ತು ಮದುವೆ ಸಭೆ ಸಮಾರಂಭಗಳಲ್ಲಿ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ, ಈ ಹಣ್ಣಿನ ಮಾರಾಟಗಾರರು ಪರಿಪಕ್ವವಾಗದ ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಎಫ್ಎಸ್ಎಸ್ಎಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಎಥಿಲೀನ್ನಂತಹ ರಾಸಾಯನಿಕ ಬಳಸಿ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ .
ಕೃತಕವಾಗಿ ಮಾಗಿದ ಹಣ್ಣನ್ನು ತಿಂದರೆ ಉಸಿರಾಟ ತೊಂದರೆ ಮತ್ತು ಚರ್ಮದ ಕಾಯಿಲೆ ಸೇರಿದಂತೆ ಇತರೆ ಕಾಯಿಲೆಗಳು ಬಂದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಆರೋಪಿಗಳು ತಮ್ಮ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಹಾನಿಕಾರಕ ರಾಸಾಯನಿಕಗಳನ್ನು ಅಕ್ರಮವಾಗಿ ಬಳಸುತ್ತಿದ್ದಾರೆ ಮತ್ತು ಅಮಾಯಕ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ ಮತ್ತು FSSAI ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…