ಮಾರುಕಟ್ಟೆಯಲ್ಲಿ ಮಾವಿನ ಹಣ್ಣುಗಳನ್ನು ಖರೀದಿಸುವಾಗ ಹುಷಾರಾಗಿರಿ…!

ಮಾವಿನ ಹಣ್ಣುಗಳನ್ನು ರಾಸಾಯನಿಕಗಳಿಂದ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ  ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.

ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ಸುಲ್ತಾನ್ ಬಜಾರ್ ಪೊಲೀಸರೊಂದಿಗೆ ನ್ಯೂ ಲಿಬರ್ಟಿ ಹಣ್ಣಿನ ಅಂಗಡಿ ಮತ್ತು ಹೈದರಾಬಾದ್‌ನ ಗಡಿಯಾರ ಗೋಪುರದ ಎದುರು ಮೊಅಜ್ಜಮ್ ಜಾಹಿ ಮಾರ್ಕೆಟ್‌ನಲ್ಲಿರುವ ಲಕ್ಕಿ ಎಂಬ ಹೆಸರಿನ ಎರಡು ಹಣ್ಣಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇರ್ಫಾನ್ ಖಾನ್ ಮತ್ತು ಮೊಹಮ್ಮದ್ ಹುಸೇನ್ ಬಂಧಿತ ಆರೋಪಿಗಳು.

ಮಾವಿನ ಹಣ್ಣುಗಳನ್ನು ಹಣ್ಣಾಗಿಸಲು ಕೃತಕವಾಗಿ ಮಾಗಿಸುವ ವಿಧಾನದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಮಾವಿನ ಹಣ್ಣುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಸ್ತುತ ಪವಿತ್ರ ರಂಜಾನ್ ಮತ್ತು ಮದುವೆ ಸಭೆ ಸಮಾರಂಭಗಳಲ್ಲಿ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ, ಈ ಹಣ್ಣಿನ ಮಾರಾಟಗಾರರು ಪರಿಪಕ್ವವಾಗದ ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಎಥಿಲೀನ್‌ನಂತಹ ರಾಸಾಯನಿಕ ಬಳಸಿ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ .

ಕೃತಕವಾಗಿ ಮಾಗಿದ ಹಣ್ಣನ್ನು ತಿಂದರೆ ಉಸಿರಾಟ ತೊಂದರೆ ಮತ್ತು ಚರ್ಮದ ಕಾಯಿಲೆ ಸೇರಿದಂತೆ ಇತರೆ ಕಾಯಿಲೆಗಳು ಬಂದು ಜನರ  ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ.

ಆರೋಪಿಗಳು ತಮ್ಮ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಹಾನಿಕಾರಕ ರಾಸಾಯನಿಕಗಳನ್ನು ಅಕ್ರಮವಾಗಿ ಬಳಸುತ್ತಿದ್ದಾರೆ ಮತ್ತು ಅಮಾಯಕ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ ಮತ್ತು FSSAI ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

11 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

19 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago