ಮಾರುಕಟ್ಟೆಯಲ್ಲಿ ಮಾವಿನ ಹಣ್ಣುಗಳನ್ನು ಖರೀದಿಸುವಾಗ ಹುಷಾರಾಗಿರಿ…!

ಮಾವಿನ ಹಣ್ಣುಗಳನ್ನು ರಾಸಾಯನಿಕಗಳಿಂದ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ  ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.

ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ಸುಲ್ತಾನ್ ಬಜಾರ್ ಪೊಲೀಸರೊಂದಿಗೆ ನ್ಯೂ ಲಿಬರ್ಟಿ ಹಣ್ಣಿನ ಅಂಗಡಿ ಮತ್ತು ಹೈದರಾಬಾದ್‌ನ ಗಡಿಯಾರ ಗೋಪುರದ ಎದುರು ಮೊಅಜ್ಜಮ್ ಜಾಹಿ ಮಾರ್ಕೆಟ್‌ನಲ್ಲಿರುವ ಲಕ್ಕಿ ಎಂಬ ಹೆಸರಿನ ಎರಡು ಹಣ್ಣಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇರ್ಫಾನ್ ಖಾನ್ ಮತ್ತು ಮೊಹಮ್ಮದ್ ಹುಸೇನ್ ಬಂಧಿತ ಆರೋಪಿಗಳು.

ಮಾವಿನ ಹಣ್ಣುಗಳನ್ನು ಹಣ್ಣಾಗಿಸಲು ಕೃತಕವಾಗಿ ಮಾಗಿಸುವ ವಿಧಾನದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಮಾವಿನ ಹಣ್ಣುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಸ್ತುತ ಪವಿತ್ರ ರಂಜಾನ್ ಮತ್ತು ಮದುವೆ ಸಭೆ ಸಮಾರಂಭಗಳಲ್ಲಿ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ, ಈ ಹಣ್ಣಿನ ಮಾರಾಟಗಾರರು ಪರಿಪಕ್ವವಾಗದ ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಎಥಿಲೀನ್‌ನಂತಹ ರಾಸಾಯನಿಕ ಬಳಸಿ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ .

ಕೃತಕವಾಗಿ ಮಾಗಿದ ಹಣ್ಣನ್ನು ತಿಂದರೆ ಉಸಿರಾಟ ತೊಂದರೆ ಮತ್ತು ಚರ್ಮದ ಕಾಯಿಲೆ ಸೇರಿದಂತೆ ಇತರೆ ಕಾಯಿಲೆಗಳು ಬಂದು ಜನರ  ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ.

ಆರೋಪಿಗಳು ತಮ್ಮ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಹಾನಿಕಾರಕ ರಾಸಾಯನಿಕಗಳನ್ನು ಅಕ್ರಮವಾಗಿ ಬಳಸುತ್ತಿದ್ದಾರೆ ಮತ್ತು ಅಮಾಯಕ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ ಮತ್ತು FSSAI ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

7 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

10 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

24 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago