ಮಾವಿನ ಹಣ್ಣುಗಳನ್ನು ರಾಸಾಯನಿಕಗಳಿಂದ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.
ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ಸುಲ್ತಾನ್ ಬಜಾರ್ ಪೊಲೀಸರೊಂದಿಗೆ ನ್ಯೂ ಲಿಬರ್ಟಿ ಹಣ್ಣಿನ ಅಂಗಡಿ ಮತ್ತು ಹೈದರಾಬಾದ್ನ ಗಡಿಯಾರ ಗೋಪುರದ ಎದುರು ಮೊಅಜ್ಜಮ್ ಜಾಹಿ ಮಾರ್ಕೆಟ್ನಲ್ಲಿರುವ ಲಕ್ಕಿ ಎಂಬ ಹೆಸರಿನ ಎರಡು ಹಣ್ಣಿನ ಅಂಗಡಿಗಳ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಇರ್ಫಾನ್ ಖಾನ್ ಮತ್ತು ಮೊಹಮ್ಮದ್ ಹುಸೇನ್ ಬಂಧಿತ ಆರೋಪಿಗಳು.
ಮಾವಿನ ಹಣ್ಣುಗಳನ್ನು ಹಣ್ಣಾಗಿಸಲು ಕೃತಕವಾಗಿ ಮಾಗಿಸುವ ವಿಧಾನದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಮಾವಿನ ಹಣ್ಣುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಸ್ತುತ ಪವಿತ್ರ ರಂಜಾನ್ ಮತ್ತು ಮದುವೆ ಸಭೆ ಸಮಾರಂಭಗಳಲ್ಲಿ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ, ಈ ಹಣ್ಣಿನ ಮಾರಾಟಗಾರರು ಪರಿಪಕ್ವವಾಗದ ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಎಫ್ಎಸ್ಎಸ್ಎಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಎಥಿಲೀನ್ನಂತಹ ರಾಸಾಯನಿಕ ಬಳಸಿ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ .
ಕೃತಕವಾಗಿ ಮಾಗಿದ ಹಣ್ಣನ್ನು ತಿಂದರೆ ಉಸಿರಾಟ ತೊಂದರೆ ಮತ್ತು ಚರ್ಮದ ಕಾಯಿಲೆ ಸೇರಿದಂತೆ ಇತರೆ ಕಾಯಿಲೆಗಳು ಬಂದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಆರೋಪಿಗಳು ತಮ್ಮ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಹಾನಿಕಾರಕ ರಾಸಾಯನಿಕಗಳನ್ನು ಅಕ್ರಮವಾಗಿ ಬಳಸುತ್ತಿದ್ದಾರೆ ಮತ್ತು ಅಮಾಯಕ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ ಮತ್ತು FSSAI ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…