Categories: ಲೇಖನ

ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ….

ಮಾರ್ಗದರ್ಶಕರು…….

ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮೌಲ್ಯಗಳ ಸಾಗಾಣಿಕೆ ಮಾಡುವ ನಿಜ ಮನುಷ್ಯರನ್ನು ಗಮನದಲ್ಲಿಟ್ಟುಕೊಂಡು ಈ ಪದ ಪ್ರಯೋಗ ಮಾಡಲಾಗುತ್ತಿದೆ…….

ನಡೆ ನುಡಿಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದ, ವಿಶಾಲ ಮನೋಭಾವದ, ತುಂಬು ಹೃದಯದ ಪ್ರಬುದ್ಧ ವ್ಯಕ್ತಿತ್ವದ ಜನರೇ ಈ ಮಾರ್ಗದರ್ಶಕರು….

ಎಲ್ಲಾ ಕಾಲದಲ್ಲೂ ಒಂದಷ್ಟು ಜನರು ಈ ಕೆಲಸವನ್ನು ಅಥವಾ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಂಚನೆಯಿಂದ ನಿರ್ವಹಿಸಿದ್ದಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ…..

ಆದರೆ ಈಗಿನ ಸಂದರ್ಭದಲ್ಲಿ….

ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ
ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ…….

ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ ಎದುರಿಸುತ್ತಿದೆ.

ಶಿಕ್ಷಣ – ಉದ್ಯೋಗ – ಆರೋಗ್ಯ – ಮದುವೆ – ಕುಟುಂಬದ ನಿರ್ವಹಣೆ ‌- ಸಾಮಾಜಿಕ ಜವಾಬ್ದಾರಿ – ಮಾನವೀಯ ಮೌಲ್ಯಗಳ ನಿರ್ವಹಣೆ – ವೈಯಕ್ತಿಕ ಮಾನಸಿಕ ಒತ್ತಡ ಇವುಗಳಲ್ಲಿ ಸ್ಪಷ್ಟವಾದ ತೀರ್ಮಾನ ಕೈಗೊಳ್ಳುವಲ್ಲಿ ಯುವ ಜನಾಂಗ ವಿಫಲವಾಗುತ್ತಿದೆ.

ಕೆಲವು ಕಾರ್ಪೊರೇಟ್ ಸಂಸ್ಥೆಗಳು ವ್ಯಕ್ತಿತ್ವ ವಿಕಸನದ ಕೆಲವು ಸಲಹಾ ಕೇಂದ್ರಗಳನ್ನು ಅಲ್ಲಲ್ಲಿ ‌ಸ್ಥಾಪಿಸಿವೆ. ಆದರೆ ಅವುಗಳು ಸಂಪೂರ್ಣ ವಾಣಿಜ್ಯೀಕರಣವಾಗಿವೆ ಮತ್ತು ಅದರಲ್ಲಿ ಭಾರತೀಯ ಸಂಸ್ಕೃತಿಯ – ಈ ಮಣ್ಣಿನ ಮೂಲದ್ರವ್ಯವೇ ಇರುವುದಿಲ್ಲ.

ಎಸ್ಎಸ್ಎಲ್ ಸಿ , ಪಿಯುಸಿ ನಂತರದ ಶಿಕ್ಷಣದ ಆಯ್ಕೆಗಳ ಬಗ್ಗೆ ಪೋಷಕರಲ್ಲಿ ಆತಂಕ ಮತ್ತು ಗೊಂದಲ ಉಂಟಾಗುತ್ತದೆ. ಮಗ ಅಥವಾ ಮಗಳು ತೆಗೆದುಕೊಳ್ಳುವ ಅಂಕಗಳು, ಆ ಮಕ್ಕಳ ಆಸಕ್ತಿ, ಅದಕ್ಕಿರುವ ಅವಕಾಶ ಯಾವುದನ್ನೂ ಸರಿಯಾಗಿ ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಪರೀಕ್ಷೆಗಳಲ್ಲಿ ಅನುತ್ತೀರ್ಣವಾದರೆ ಆಗ ಇರುವ ಅವಕಾಶದ ಬಗ್ಗೆಯೂ ಮಾಹಿತಿ ಇರುವುದಿಲ್ಲ. ಆ ಮಕ್ಕಳ ಬದುಕೇ ಮುಗಿದು ಹೋದಂತೆ ಆಡುತ್ತಾರೆ.

ಆರೋಗ್ಯದ ಬಗ್ಗೆ ಆಗುವ ಬದಲಾವಣೆಗಳು – ಅದರ ಚಿಕಿತ್ಸಾ ವಿಧಾನಗಳ ಬಗ್ಗೆಯೂ ಸರಿಯಾದ ಗುಣಮಟ್ಟದ ಮಾರ್ಗದರ್ಶನ ದೊರಕದೆ ಮಾಧ್ಯಮಗಳ ಜಾಹೀರಾತುಗಳಿಗೆ ಮರುಳಾಗುವುದನ್ನು ಗಮನಿಸಬಹುದು.

ಉದ್ಯೋಗದ ಆಯ್ಕೆ, ತದನಂತರ ಗಂಡ ಅಥವಾ ಹೆಂಡತಿಯ ಆಯ್ಕೆ, ಆ ಸಂದರ್ಭದಲ್ಲಿ ಪೋಷಕರ ಜವಾಬ್ದಾರಿ, ಸಾಮಾನ್ಯ ಕೌಟುಂಬಿಕ ಕಲಹಗಳ ನಿರ್ವಹಣೆ ಈ ವಿಷಯಗಳಲ್ಲಿ ತುಂಬಾ ಎಡುವುತ್ತಿದ್ದಾರೆ. ಪೋಲೀಸು, ಕೋರ್ಟು, ಕಚೇರಿ ಎಂದು ಅಲೆದಾಡುತ್ತಾ ಸಣ್ಣ ವಿಷಯಗಳಿಗೂ ಒತ್ತಡವನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿದ್ದಾರೆ.

ವ್ಯಾಪಾರ, ವ್ಯವಹಾರ, ಸಂಗೀತ, ಸಾಹಿತ್ಯ, ಕಲೆ, ಕ್ರೀಡೆ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಆಸಕ್ತಿ ಇರುವವರು ಬೆರಳೆಣಿಕೆಯಷ್ಟು ಇರುವ ಯಶಸ್ವಿ ಜನರನ್ನು ಅನುಕರಣೆ ಮಾಡಲು ಹೋಗಿ ಸರಿಯಾದ ಮಾರ್ಗದರ್ಶನವಿಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಜಾಗತೀಕರಣದ ಈ ಸಂದರ್ಭದಲ್ಲಿ ಬದಲಾದ ವ್ಯವಸ್ಥೆಯನ್ನು ಗುರುತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ.

ಮೊದಲಿದ್ದ ಹಿತೈಷಿಗಳ ಮಾರ್ಗದರ್ಶನಕ್ಕೆ ಪರ್ಯಾಯವಾಗಿ ಈಗ ಇಂಟರ್ ನೆಟ್ ನಲ್ಲಿ ಎಲ್ಲಾ ಮಾಹಿತಿಗಳೂ ಸಿಗುತ್ತಿವೆ. ಇದು ಮೇಲ್ನೋಟಕ್ಕೆ ಉತ್ತಮ ಬೆಳವಣಿಗೆ. ಆದರೆ ನಿಜವಾದ ಅಂತಃಸತ್ವ ಇಲ್ಲದ ಯಾಂತ್ರಿಕ ಮತ್ತು ನಿರ್ಜೀವ ಸ್ಥಿತಿಯತ್ತ ಯುವ ಜನಾಂಗವನ್ನು ಕೊಂಡೊಯ್ಯುತ್ತಿದೆ.

ಮಾಹಿತಿಯೇ ಜ್ಞಾನ ಎಂಬ ತಪ್ಪು ಅಭಿಪ್ರಾಯ ಸಾಕಷ್ಟು ಜನರಲ್ಲಿ ಮನೆ ಮಾಡಿದೆ. ಇದು ವ್ಯಕ್ತಿಯ ಕ್ರಿಯಾತ್ಮಕತೆಯನ್ನು ಕೊಲ್ಲುತ್ತಿದೆ. ಹರಿಯುವ ನೀರಿನಂತೆ ಜ್ಞಾನವು ಸಹ ಸದಾ ಚಲಿಸುತ್ತಲೇ ಇರುತ್ತದೆ. ಅದು ನಿಂತ ನೀರಾದಾಗ ಕೊಳೆಯಲಾರಂಭಿಸುತ್ತದೆ. ನಮ್ಮೊಳಗಿನ ಅಜ್ಞಾನವನ್ನು ಹುಡುಕಿ ಹೋಗಲಾಡಿಸುವುದು ಸಹ ಜ್ಞಾನದ ಒಂದು ಭಾಗ. ಅದರ ಆಳಕ್ಕೆ ಇಳಿಯುವ ತಾಳ್ಮೆ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ವಾತಾವರಣ ಇಲ್ಲವಾಗಿದೆ.

ಇದು ಅಪಾಯಕಾರಿ ಎನ್ನುವುದಕ್ಕಿಂತಲೂ ಇದೊಂದು ಸವಾಲು ಎಂದು ಪರಿಗಣಿಸಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮತ್ತು ಆ ಮಕ್ಕಳಿಗೆ ಪ್ರಬುದ್ದತೆಯ ಗುಣಮಟ್ಟದ ಮಾರ್ಗದರ್ಶನ ಸಿಗುವಂತೆ ಮಾಡುವ ಜವಾಬ್ದಾರಿ ಹಿರಿಯರು ತೆಗೆದುಕೊಳ್ಳಬೇಕಾಗಿದೆ.

ಆಗ ಮುಂದಿನ ಪೀಳಿಗೆ ಉತ್ತಮ ಗುಣಮಟ್ಟದ ಜೀವನ ಶೈಲಿಯನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ.

ಆ ದಿನಗಳ ನಿರೀಕ್ಷೆಯಲ್ಲಿ…………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago