ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿ ಸ್ವಚ್ಛತಾ ಕಾರ್ಯ

ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ.

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷ ವಾಕ್ಯ *ಹಿಮಪಾತ ಸಂರಕ್ಷಣೆ* ಇದು ಹಿರಿ ನದಿಗಳನ್ನು ಸಂರಕ್ಷಿಸುವುದನ್ನು ಒತ್ತಿ ಹೇಳುತ್ತದೆ ಮತ್ತು ಪ್ರಮುಖ ಸಿಹಿ ನೀರಿನ ಮೂಲಗಳನ್ನು ರಕ್ಷಿಸಲು ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ನೀರಿನ ಸಂರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಲು ಹವಾಮಾನ ಬದಲಾವಣೆಯ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು, ಜಿಲ್ಲಾ ಪಂಚಾಯಿತಿಯಡಿ 612 ಕೆರೆಗಳು ಸೇರಿ ಒಟ್ಟು 710 ಕೆರೆಗಳು ಇದೆ. 87 ಕಲ್ಯಾಣಿ, 146 ಕುಂಟೆ, 82 ಗೋಕಟ್ಟೆ, 36 ಕಟ್ಟೆಗಳು ಸೇರಿ ಒಟ್ಟು 356 ಸಂಪ್ರದಾಯಿಕ ನೀರು ಸಂಗ್ರಹಣ ಮೂಲಗಳಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಕೆರೆಗಳು ಮತ್ತು ಸಂಪ್ರದಾಯಿಕ ನೀರು ಸಂಗ್ರಹಣ ವ್ಯವಸ್ಥೆಗಳು ಇರುವುದರಿಂದ ಸಾಮಾನ್ಯವಾಗಿ ತಂಪು ವಾತಾವರಣ ಇರಬೇಕಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನಗರಾಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ಜಿಲ್ಲೆಯಲ್ಲಿರುವ ಕೆರೆ, ಕಲ್ಯಾಣಿ ಕುಂಟೆಗಳನ್ನು ಪುನಃಚೇತನ ಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಜನತೆ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆರೆ, ಕಲ್ಯಾಣಿ, ಕುಂಟೆಗಳನ್ನು ಸ್ವಚ್ಚಗೊಳಿಸಿ ಪುನಶ್ಚೇತನಗೊಳಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

Ramesh Babu

Journalist

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

4 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

5 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

10 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

11 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

21 hours ago