ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ.
ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷ ವಾಕ್ಯ *ಹಿಮಪಾತ ಸಂರಕ್ಷಣೆ* ಇದು ಹಿರಿ ನದಿಗಳನ್ನು ಸಂರಕ್ಷಿಸುವುದನ್ನು ಒತ್ತಿ ಹೇಳುತ್ತದೆ ಮತ್ತು ಪ್ರಮುಖ ಸಿಹಿ ನೀರಿನ ಮೂಲಗಳನ್ನು ರಕ್ಷಿಸಲು ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ನೀರಿನ ಸಂರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಲು ಹವಾಮಾನ ಬದಲಾವಣೆಯ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು, ಜಿಲ್ಲಾ ಪಂಚಾಯಿತಿಯಡಿ 612 ಕೆರೆಗಳು ಸೇರಿ ಒಟ್ಟು 710 ಕೆರೆಗಳು ಇದೆ. 87 ಕಲ್ಯಾಣಿ, 146 ಕುಂಟೆ, 82 ಗೋಕಟ್ಟೆ, 36 ಕಟ್ಟೆಗಳು ಸೇರಿ ಒಟ್ಟು 356 ಸಂಪ್ರದಾಯಿಕ ನೀರು ಸಂಗ್ರಹಣ ಮೂಲಗಳಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಕೆರೆಗಳು ಮತ್ತು ಸಂಪ್ರದಾಯಿಕ ನೀರು ಸಂಗ್ರಹಣ ವ್ಯವಸ್ಥೆಗಳು ಇರುವುದರಿಂದ ಸಾಮಾನ್ಯವಾಗಿ ತಂಪು ವಾತಾವರಣ ಇರಬೇಕಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದನ್ನು ಗಮನಿಸಬಹುದಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನಗರಾಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ಜಿಲ್ಲೆಯಲ್ಲಿರುವ ಕೆರೆ, ಕಲ್ಯಾಣಿ ಕುಂಟೆಗಳನ್ನು ಪುನಃಚೇತನ ಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಜನತೆ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆರೆ, ಕಲ್ಯಾಣಿ, ಕುಂಟೆಗಳನ್ನು ಸ್ವಚ್ಚಗೊಳಿಸಿ ಪುನಶ್ಚೇತನಗೊಳಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…