ಮಾರ್ಚ್ 22 ರಂದು ಜಿಲ್ಲಾಧಿಕಾರಿಗಳಿಂದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿ ಸ್ವಚ್ಛತಾ ಕಾರ್ಯ

ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ.

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷ ವಾಕ್ಯ *ಹಿಮಪಾತ ಸಂರಕ್ಷಣೆ* ಇದು ಹಿರಿ ನದಿಗಳನ್ನು ಸಂರಕ್ಷಿಸುವುದನ್ನು ಒತ್ತಿ ಹೇಳುತ್ತದೆ ಮತ್ತು ಪ್ರಮುಖ ಸಿಹಿ ನೀರಿನ ಮೂಲಗಳನ್ನು ರಕ್ಷಿಸಲು ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ನೀರಿನ ಸಂರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಲು ಹವಾಮಾನ ಬದಲಾವಣೆಯ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು, ಜಿಲ್ಲಾ ಪಂಚಾಯಿತಿಯಡಿ 612 ಕೆರೆಗಳು ಸೇರಿ ಒಟ್ಟು 710 ಕೆರೆಗಳು ಇದೆ. 87 ಕಲ್ಯಾಣಿ, 146 ಕುಂಟೆ, 82 ಗೋಕಟ್ಟೆ, 36 ಕಟ್ಟೆಗಳು ಸೇರಿ ಒಟ್ಟು 356 ಸಂಪ್ರದಾಯಿಕ ನೀರು ಸಂಗ್ರಹಣ ಮೂಲಗಳಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಕೆರೆಗಳು ಮತ್ತು ಸಂಪ್ರದಾಯಿಕ ನೀರು ಸಂಗ್ರಹಣ ವ್ಯವಸ್ಥೆಗಳು ಇರುವುದರಿಂದ ಸಾಮಾನ್ಯವಾಗಿ ತಂಪು ವಾತಾವರಣ ಇರಬೇಕಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದನ್ನು ಗಮನಿಸಬಹುದಾಗಿದೆ.

ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನಗರಾಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ಜಿಲ್ಲೆಯಲ್ಲಿರುವ ಕೆರೆ, ಕಲ್ಯಾಣಿ ಕುಂಟೆಗಳನ್ನು ಪುನಃಚೇತನ ಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಜನತೆ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆರೆ, ಕಲ್ಯಾಣಿ, ಕುಂಟೆಗಳನ್ನು ಸ್ವಚ್ಚಗೊಳಿಸಿ ಪುನಶ್ಚೇತನಗೊಳಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

4 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

5 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

6 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

8 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago