ವಿಶ್ವ ಜಲ ದಿನದ ಅಂಗವಾಗಿ ಮಾರ್ಚ್ 22 ರಂದು ಬೆಳಿಗ್ಗೆ 06 ಗಂಟೆಗೆ ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ದೇವಸ್ಥಾನದ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ, ಪುನಶ್ಚೇತನ ಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕೋರಿದ್ದಾರೆ.
ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷ ವಾಕ್ಯ *ಹಿಮಪಾತ ಸಂರಕ್ಷಣೆ* ಇದು ಹಿರಿ ನದಿಗಳನ್ನು ಸಂರಕ್ಷಿಸುವುದನ್ನು ಒತ್ತಿ ಹೇಳುತ್ತದೆ ಮತ್ತು ಪ್ರಮುಖ ಸಿಹಿ ನೀರಿನ ಮೂಲಗಳನ್ನು ರಕ್ಷಿಸಲು ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಮತ್ತು ಭವಿಷ್ಯದ ಪೀಳಿಗೆಗೆ ನೀರಿನ ಸಂರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಲು ಹವಾಮಾನ ಬದಲಾವಣೆಯ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು, ಜಿಲ್ಲಾ ಪಂಚಾಯಿತಿಯಡಿ 612 ಕೆರೆಗಳು ಸೇರಿ ಒಟ್ಟು 710 ಕೆರೆಗಳು ಇದೆ. 87 ಕಲ್ಯಾಣಿ, 146 ಕುಂಟೆ, 82 ಗೋಕಟ್ಟೆ, 36 ಕಟ್ಟೆಗಳು ಸೇರಿ ಒಟ್ಟು 356 ಸಂಪ್ರದಾಯಿಕ ನೀರು ಸಂಗ್ರಹಣ ಮೂಲಗಳಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಕೆರೆಗಳು ಮತ್ತು ಸಂಪ್ರದಾಯಿಕ ನೀರು ಸಂಗ್ರಹಣ ವ್ಯವಸ್ಥೆಗಳು ಇರುವುದರಿಂದ ಸಾಮಾನ್ಯವಾಗಿ ತಂಪು ವಾತಾವರಣ ಇರಬೇಕಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದನ್ನು ಗಮನಿಸಬಹುದಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ನಗರಾಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ಜಿಲ್ಲೆಯಲ್ಲಿರುವ ಕೆರೆ, ಕಲ್ಯಾಣಿ ಕುಂಟೆಗಳನ್ನು ಪುನಃಚೇತನ ಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಜನತೆ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆರೆ, ಕಲ್ಯಾಣಿ, ಕುಂಟೆಗಳನ್ನು ಸ್ವಚ್ಚಗೊಳಿಸಿ ಪುನಶ್ಚೇತನಗೊಳಿಸಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…