ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ SSLC ಮುಖ್ಯ ಪರೀಕ್ಷೆ; ಅಗತ್ಯ ಕ್ರಮಕ್ಕೆ ಎಡಿಸಿ ಅಮರೇಶ್.ಹೆಚ್ ಸೂಚನೆ

2023ರ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವು ಅತ್ಯಂತ ಶಾಂತಿಯುತವಾಗಿ, ಸುಗಮವಾಗಿ ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಮತ್ತು ಕಾನೂನು ಭದ್ರತೆಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ ಕುರಿತ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ವೇಳಾಪಟ್ಟಿಯೂ ವಿದ್ಯಾರ್ಥಿ ಸ್ನೇಹಿಯಾಗಿದೆ ಎಂದರಲ್ಲದೆ, ಪ್ರತಿದಿನ ಬೆಳಿಗ್ಗೆ 10:15 ಗಂಟೆಗೆ ಮೊದಲ ಬೆಲ್ ಆಗಲಿದ್ದು, 10:30 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ಬರುವಂತೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳಾಗಲೀ, ವಿದ್ಯಾರ್ಥಿಗಳಾಗಲೀ ಮೊಬೈಲ್, ಕ್ಯಾಮೆರಾ, ಡಿಜಿಟಲ್ ಗಡಿಯಾರವನ್ನು ತರಬಾರದು ಎಂದು ಕಟ್ಟುನಿಟ್ಟಾಗಿ ಹೇಳಿದರು.

ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಕೊಠಡಿ ನಿಗದಿಗೊಳಿಸಲು ಸೂಚಿಸಿದರಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಉತ್ತಮ ಆಸನ ವ್ಯವಸ್ಥೆ, ಶುಭ್ರ ಶೌಚಾಲಯ, ಕುಡಿಯುವ ನೀರು ಸಿಸಿ ಕ್ಯಾಮರಾ, ಗಾಳಿ ಬೆಳಕಿನಿಂದ ಕೂಡಿದ ಕೊಠಡಿಗಳು ಇತ್ಯಾದಿ ಮೂಲಭೂತ ಸೌಲಭ್ಯಗಳು ಇರುವ ಕುರಿತು ಭೇಟಿ ನೀಡಿ, ಖಚಿತಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ 14,040 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 295 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 58 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಪೈಕಿ ದೇವನಹಳ್ಳಿಯಲ್ಲಿ ಮಾತ್ರ ಒಂದು ಪರೀಕ್ಷಾ ಕೇಂದ್ರವನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ ಎಂದರು.

ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಮತ್ತು ರೆಗ್ಯುಲರ್ ಮಾರ್ಗ ಇಲ್ಲದ ಕಡೆಗಳಲ್ಲಿ ಮಕ್ಕಳಿಗಾಗಿಯೇ ಪರೀಕ್ಷಾ ವಿಶೇಷ ಬಸ್‌ಗಳನ್ನು ಒದಗಿಸುವಂತೆ ದೊಡ್ಡಬಳ್ಳಾಪುರ ಮತ್ತು ಇತರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಅವರಿಗೆ ಸೂಚಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯನಿರತರೆಲ್ಲರೂ ಕಡ್ಡಾಯವಾಗಿ ಮಂಡಳಿಯಿಂದ ನೀಡಿರುವ ಫೋಟೋ ಸಹಿತ ಗುರುತಿನ ಚೀಟಿಯನ್ನು ಧರಿಸಬೇಕು ಹಾಗೂ ಅನಧಿಕೃತ ವ್ಯಕ್ತಿಗಳು ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದರಲ್ಲದೆ, ಪರೀಕ್ಷೆ ಕುರಿತಂತೆ ಸುಳ್ಳು ಸುದ್ದಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎನ್. ಶ್ರೀಕಂಠ, ಜಿಲ್ಲಾ ಡಯಟ್ ನ ಪ್ರಾಂಶುಪಾಲರಾದ ಉಷಾಕುಮಾರಿ, ಶಿಕ್ಷಣಾಧಿಕಾರಿ ಹನುಮಂತಪ್ಪ, ನಾಲ್ಕು ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ತಾಲ್ಲೂಕು ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಖಜಾನಾಧಿಕಾರಿಗಳು, ಸಂಬಂಧಿಸಿದ ಭಾಗೀದಾರ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago