ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ವತಿಯಿಂದ ನಗರದ ಡಿ-ಕ್ರಾಸ್ ಮೇಲ್ಸೇತುವೆ ಸಮೀಪದ ಧೀರಜ್ ಮುನಿರಾಜು ನಿವಾಸದ ಬಳಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ,ಬಿಎಸ್ಸಿ, ಬಿಬಿಎ, ಎಂಬಿಎ, ಎಂಸಿಎ,ಐಟಿಐ, ಡಿಪ್ಲೋಮಾ, ಬಿಇ, ಯಾವುದೇ ಪದವಿ ಹಾಗೂ ಕಂಪ್ಯೂಟರ್ ಕೋರ್ಸ್ ವ್ಯಾಸಂಗ ಮಾಡಿರುವ ನಿರುದ್ಯೋಗಿ ಯುವಕ-ಯುವತಿಯರು ಮೇಳದಲ್ಲಿ ಭಾಗವಹಿಸಬಹುದು.
ತಾಲೂಕಿನ ನಿರುದ್ಯೋಗ ಯುವಜನರಿಗಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮುಖಂಡ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಈ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದಾರೆ.
ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಮೇಳದಲ್ಲಿ 100 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿವೆ. ಈಗಾಗಲೇ 8000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಆಸಕ್ತ ಉದ್ಯೋಗಾಕಾಂಕ್ಷಿಗಳು 5 ಸೆಟ್ ಸ್ವವಿವರ (ರೆಸ್ಯೂಮ್)ದ ಪ್ರತಿಗಳೊಂದಿಗೆ ಆಧಾರ್ ಕಾರ್ಡ್, ಗುರುತಿನ ಚೀಟಿ ತರಲು ಸೂಚಿಸಲಾಗಿದೆ. ಉದ್ಯೋಗ ಮೇಳದಲ್ಲಿ ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ ಮೊ: 8088543440/ 9916295222 ಸಂಪರ್ಕಿಸಲು ಕೋರಲಾಗಿದೆ.
ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…