ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ವತಿಯಿಂದ ನಗರದ ಡಿ-ಕ್ರಾಸ್ ಮೇಲ್ಸೇತುವೆ ಸಮೀಪದ ಧೀರಜ್ ಮುನಿರಾಜು ನಿವಾಸದ ಬಳಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ,ಬಿಎಸ್ಸಿ, ಬಿಬಿಎ, ಎಂಬಿಎ, ಎಂಸಿಎ,ಐಟಿಐ, ಡಿಪ್ಲೋಮಾ, ಬಿಇ, ಯಾವುದೇ ಪದವಿ ಹಾಗೂ ಕಂಪ್ಯೂಟರ್ ಕೋರ್ಸ್ ವ್ಯಾಸಂಗ ಮಾಡಿರುವ ನಿರುದ್ಯೋಗಿ ಯುವಕ-ಯುವತಿಯರು ಮೇಳದಲ್ಲಿ ಭಾಗವಹಿಸಬಹುದು.
ತಾಲೂಕಿನ ನಿರುದ್ಯೋಗ ಯುವಜನರಿಗಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮುಖಂಡ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಈ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದಾರೆ.
ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಮೇಳದಲ್ಲಿ 100 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿವೆ. ಈಗಾಗಲೇ 8000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಆಸಕ್ತ ಉದ್ಯೋಗಾಕಾಂಕ್ಷಿಗಳು 5 ಸೆಟ್ ಸ್ವವಿವರ (ರೆಸ್ಯೂಮ್)ದ ಪ್ರತಿಗಳೊಂದಿಗೆ ಆಧಾರ್ ಕಾರ್ಡ್, ಗುರುತಿನ ಚೀಟಿ ತರಲು ಸೂಚಿಸಲಾಗಿದೆ. ಉದ್ಯೋಗ ಮೇಳದಲ್ಲಿ ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ ಮೊ: 8088543440/ 9916295222 ಸಂಪರ್ಕಿಸಲು ಕೋರಲಾಗಿದೆ.
ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…