ಮಾರ್ಚ್ 8ಕ್ಕೆ ಬೃಹತ್ ಉದ್ಯೋಗ ಮೇಳ; ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜ್ ಆಯೋಜನೆ; ಧೀರಜ್ ಮುನಿರಾಜ್ ನಿವಾಸದ ಬಳಿ‌ ಉದ್ಯೋಗ ಮೇಳ

ಮಾರ್ಚ್ 8ರಂದು ಮಹಿಳಾ‌ ದಿನಾಚರಣೆ ಪ್ರಯುಕ್ತ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ವತಿಯಿಂದ ನಗರದ ಡಿ-ಕ್ರಾಸ್ ಮೇಲ್ಸೇತುವೆ ಸಮೀಪದ ಧೀರಜ್ ಮುನಿರಾಜು ನಿವಾಸದ ಬಳಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ,ಬಿಎಸ್ಸಿ, ಬಿಬಿಎ, ಎಂಬಿಎ, ಎಂಸಿಎ,ಐಟಿಐ, ಡಿಪ್ಲೋಮಾ, ಬಿಇ, ಯಾವುದೇ ಪದವಿ ಹಾಗೂ ಕಂಪ್ಯೂಟರ್ ಕೋರ್ಸ್ ವ್ಯಾಸಂಗ ಮಾಡಿರುವ ನಿರುದ್ಯೋಗಿ ಯುವಕ-ಯುವತಿಯರು ಮೇಳದಲ್ಲಿ ಭಾಗವಹಿಸಬಹುದು.

ತಾಲೂಕಿನ ನಿರುದ್ಯೋಗ ಯುವಜನರಿಗಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮುಖಂಡ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಈ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದಾರೆ.

ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಮೇಳದಲ್ಲಿ 100 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿವೆ. ಈಗಾಗಲೇ 8000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ‌ ಮಾಡಿಕೊಂಡಿದ್ದಾರೆ.

ಆಸಕ್ತ ಉದ್ಯೋಗಾಕಾಂಕ್ಷಿಗಳು 5 ಸೆಟ್ ಸ್ವವಿವರ (ರೆಸ್ಯೂಮ್)ದ ಪ್ರತಿಗಳೊಂದಿಗೆ ಆಧಾರ್ ಕಾರ್ಡ್, ಗುರುತಿನ ಚೀಟಿ ತರಲು ಸೂಚಿಸಲಾಗಿದೆ. ಉದ್ಯೋಗ ಮೇಳದಲ್ಲಿ ಅಂಗವಿಕಲರಿಗೆ ಪ್ರಥಮ‌ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ ಮೊ: 8088543440/ 9916295222 ಸಂಪರ್ಕಿಸಲು ಕೋರಲಾಗಿದೆ.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಣಿ‌ ಮಾಡಿಕೊಳ್ಳಬಹುದು ಎಂದು‌ ಬೆಂಗಳೂರು ಗ್ರಾಮಾಂತರ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago