ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಸಾರಥಿ ಸತ್ಯಪ್ರಕಾಶ್ ರಿಂದ ಮೆಡಿಕಲ್ ಕಿಟ್, ಕನ್ನಡಕ, ಶ್ರವಣಯಂತ್ರ ವಿತರಣೆ

ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ವಿ.ಸಾರಥಿ ಸತ್ಯಪ್ರಕಾಶ್ ಅವರು ಒಕ್ಕಲಿಗ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಣ್ಣಿನ ದೋಷ ಉಳ್ಳವರಿಗೆ ಕನ್ನಡಕಗಳು, ಶ್ರವಣದೋಷ ಉಳ್ಳವರಿಗೆ ಆತ್ಯಾಧುನಿಕ ಶ್ರವಣಯಂತ್ರಗಳು ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸಿ ನಾರಾಯಣಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಟಿಎನ್ ನಾಗರಾಜು, ನಗರ ಘಟಕ ಅಧ್ಯಕ್ಷ ಶಿವಶಂಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷೀನಾರಾಯಣ, ಮುಖಂಡರಾದ ಕೆಟಿ ಕೃಷ್ಣಪ್ಪ ಸೇರಿದಂತೆ ತಾಲೂಕಿನ ಬಿಜೆಪಿ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಸತ್ಯಪ್ರಕಾಶ್ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ನಗರದ ಭಗತ್ ಸಿಂಗ್ ಮೈದಾನದಲ್ಲಿ ಬೃಹತ್ ಆರೋಗ್ಯ ಶಿಬಿರ ಆಯೋಜನೆ ಮಾಡಿದ್ದರು. ಶಿಬಿರದಲ್ಲಿ ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಣ್ಣು, ಕಿವಿ ದೋಷಗಳುಳ್ಳವರಿಗೆ ನಾಳೆ ಕನ್ನಡಕ ಮತ್ತು ಶ್ರವಣ ದೋಷ ಯಂತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಮನವಿ‌ ಮಾಡಿರುವ ಸಾರಥಿ ಸತ್ಯಪ್ರಕಾಶ್.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

21 minutes ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

17 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

18 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

23 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

24 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago