ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ ಸಾರಥಿ ಸತ್ಯಪ್ರಕಾಶ್ ರಿಂದ ಮೆಡಿಕಲ್ ಕಿಟ್, ಕನ್ನಡಕ, ಶ್ರವಣಯಂತ್ರ ವಿತರಣೆ

ಮಾರ್ಚ್ 8ರಂದು ಮಹಿಳಾ ದಿನಾಚರಣೆ ಪ್ರಯುಕ್ತ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕೆ.ವಿ.ಸಾರಥಿ ಸತ್ಯಪ್ರಕಾಶ್ ಅವರು ಒಕ್ಕಲಿಗ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಣ್ಣಿನ ದೋಷ ಉಳ್ಳವರಿಗೆ ಕನ್ನಡಕಗಳು, ಶ್ರವಣದೋಷ ಉಳ್ಳವರಿಗೆ ಆತ್ಯಾಧುನಿಕ ಶ್ರವಣಯಂತ್ರಗಳು ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಬಿಸಿ ನಾರಾಯಣಸ್ವಾಮಿ, ತಾಲೂಕು ಬಿಜೆಪಿ ಅಧ್ಯಕ್ಷ ಟಿಎನ್ ನಾಗರಾಜು, ನಗರ ಘಟಕ ಅಧ್ಯಕ್ಷ ಶಿವಶಂಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷೀನಾರಾಯಣ, ಮುಖಂಡರಾದ ಕೆಟಿ ಕೃಷ್ಣಪ್ಪ ಸೇರಿದಂತೆ ತಾಲೂಕಿನ ಬಿಜೆಪಿ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಸತ್ಯಪ್ರಕಾಶ್ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ನಗರದ ಭಗತ್ ಸಿಂಗ್ ಮೈದಾನದಲ್ಲಿ ಬೃಹತ್ ಆರೋಗ್ಯ ಶಿಬಿರ ಆಯೋಜನೆ ಮಾಡಿದ್ದರು. ಶಿಬಿರದಲ್ಲಿ ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಣ್ಣು, ಕಿವಿ ದೋಷಗಳುಳ್ಳವರಿಗೆ ನಾಳೆ ಕನ್ನಡಕ ಮತ್ತು ಶ್ರವಣ ದೋಷ ಯಂತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಮನವಿ‌ ಮಾಡಿರುವ ಸಾರಥಿ ಸತ್ಯಪ್ರಕಾಶ್.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

6 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

14 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago