ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.
ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…