ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.
ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಲ್ ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ-ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ…
ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು…
ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಯಾವುದು ನ್ಯಾಯ...... ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ…
ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…