ಮಾರ್ಚ್ 9 ರಂದು ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ

ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.

ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.

ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

1 hour ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

2 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

3 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

4 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

15 hours ago