ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.
ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…