ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.
ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.
ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…