ಮಾರ್ಚ್ 9 ರಂದು ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ

ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.

ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.

ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

24 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago