ಮಾರ್ಚ್ 9 ರಂದು ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ

ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.

ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.

ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

4 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

16 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago