ಮಾರ್ಚ್ 9 ರಂದು ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ

ಕನಸವಾಡಿ(ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿಯಲ್ಲಿ ಶನಿಮಹಾತ್ಮಸ್ವಾಮಿ ಬ್ರಹ್ಮರಥೋತ್ಸವ ಮಾರ್ಚ್ 9 ರಂದು ಮಧ್ಯಾಹ್ನ 1.35ಕ್ಕೆ ನಡೆಯಲಿದೆ. ಬ್ರಹ್ಮರಥೋತ್ಸವದ ಅಂಗವಾಗಿ ಒಂದು ವಾರಗಳ ನಡೆಯುವ ಜಾತ್ರೆಯಲ್ಲಿ ವಿವಿಧ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನಾಟಕೋತ್ಸವ ನಡೆಯಲಿವೆ.

ಬ್ರಹ್ಮ ರಥೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ ನಡೆಯುವ ನಾಟಕೋತ್ಸವದಲ್ಲಿ ಭಾಗವಹಿಸುವ ಪ್ರತಿ ತಂಡಗಳಿಗೆ ದೇವಾಲಯದ ವತಿಯಿಂದ ₹6,500 ಪ್ರೋತ್ಸಾಹ ನೀಡಲಾಗುವುದು ಎಂದು ದೇವಾಲಯದ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದ್ದಾರೆ.

ಮಾರ್ಚ್ 8 ರಂದು ರಾತ್ರಿ 6 ಗಂಟೆಗೆ ಗಣಪತಿ ಪ್ರಾರ್ಥನೆ, ಧ್ವಜಾರೋಹಣ, ವಿವಿಧ ಹೋಮಗಳು ನಡೆಯಲಿವೆ. ಮಾರ್ಚ್ 10 ರಂದು ರಾತ್ರಿ 7.30ಕ್ಕೆ ಬೆಳ್ಳಿ ರಥದಲ್ಲಿ ಕಾಕವಾಹನೋತ್ಸವ, ತಮಟೆ ವಾಧ್ಯ,ವೀರಗಾಸೆ ನೃತ್ಯ, ಸಂಗೀತ ರಸ ಸಂಜೆ ಕಾರ್ಯಕ್ರಮಗಳು ನಡೆಯಲಿವೆ.

ಮಾರ್ಚ್ 11 ರಂದು ರಾತ್ರಿ 8 ಗಂಟೆಗೆ ಬೆಳ್ಳಿ ಫಲ್ಲಕ್ಕಿ ಉತ್ಸವ ಮತ್ತು ಸಂಗೀತ ರಸಸಂಜೆ ನಡೆಯಲಿದೆ. ಮಾರ್ಚ್ 12 ರಂದು ರಾತ್ರಿ 9 ಗಂಟೆಗೆ ಚಂದ್ರ ಮಂಡಲೋತ್ಸವ, ಕೀಲುಕುದುರೆ ಕಾರ್ಯಕ್ರಮ ನಡೆಯಲಿವೆ. ಮಾರ್ಚ್ 14 ರಂದು ಸಂಜೆ 7 ಗಂಟೆಗೆ ಕಾಕವಾಹನೋತ್ಸವ ಮತ್ತು ಸಂಗೀತ ಸಂಜೆ ಕಾರ್ಯಕ್ರಮ, ಮಾರ್ಚ್ 15 ರಂದು ಬೆಳಿಗ್ಗೆ 9 ಗಂಟೆಗೆ ಸುಪ್ರಭಾತೋತ್ಸವ, ಡೊಳ್ಳು ಕುಣಿತ ನಡೆಯಲಿದೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

6 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

19 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

22 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago