ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ- ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ

ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ ಕಾರ್ಖಾನೆಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಎಂದು ಉಪ ಲೋಕಾಯುಕ್ತರಾದ ಬಿ. ವೀರಪ್ಪ ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿ ವಿವಿಧ ಕೆರೆಗಳಿಗೆ ಅನಿರೀಕ್ಷಿತ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತರು ನಗರಸಭೆಯ ಕಲುಷಿತ ನೀರು, ಕಾರ್ಖಾನೆ ತ್ಯಾಜ್ಯ ಸೇರಿ ಕುಡಿಯಲು ಬಳಸಲು ಯೋಗ್ಯವಲ್ಲದಂತ ನೀರು ಸರಬರಾಜು ನಿಲ್ಲಿಸಿ, ಗ್ರಾಮಸ್ಥರಿಗೆ ಕುಡಿಯಲು ಯೋಗ್ಯ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಮಾಲಿನ್ಯ ನೀರು ಹರಿಯುತ್ತಿರುವ ವಿವಿಧ ಕೆರೆಗಳು ಹಾಗೂ ಕಾರ್ಖಾನೆಗಳ ರಾಸಯನಿಕ ತ್ಯಾಜ್ಯಗಳು ಕೆರೆ ಸೇರಿ ಜನರ ಆರೋಗ್ಯದ ಮೇಲೆ ನಾನಾ ಪರಿಣಾಮ ಬೀರುತ್ತಿದೆ. ಮುಂಬರುವ ದಿನಗಳಲ್ಲಿ ಇದು ಇನ್ನು ಉಲ್ಬಣಿಸುವ ಸಾಧ್ಯತೆ ಹೆಚ್ಚಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಅಧಿಕಾರಿಗಳೇ ನೇರ ಹೊಣೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ತಾತ್ಕಾಲಿಕ ಕಟ್ಟಡ ನೀಡಿದರೂ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಉಪಲೋಕಾಯುಕ್ತರಿಗೆ ತಿಳಿಸಿದರು. ಈ ಬಗ್ಗೆ ಮಾತನಾಡಿದ ಅವರು, ಕಚೇರಿ ನೀಡಿದರು ಏಕೆ ಸ್ಥಳಾಂತರಿಸಿಲ್ಲ. ನೀವು ಮಾತ್ರ ಚೆನ್ನಾಗಿದ್ದರೆ ಸಾಕಾ, ಜನರಿಗೆ ಏನಾದರೂ ನಿಮಗೆ ಪರವಾಗಿಲ್ಲ ಅಲ್ವಾ? ಕೂಡಲೇ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು.

*ಗ್ರಾಮಸ್ಥರ ಅಳಲು*

ಚಿಕ್ಕತುಮಕೂರು, ದೊಡ್ಡತುಮಕೂರು, ಮಜರಾಹೊಸಹಳ್ಳಿ ಭಾಗದ ಜನರು ವಿವಿಧ ಬಳಕೆಗಳಿಗೆ ಕೆರೆ ನೀರಿನ ಮೇಲೆ ಅವಲಂಬಿತರಾಗಿದ್ದು, ಪ್ರಾಣಿಗಳು ಸಹ ಅದೇ ನೀರು ಕುಡಿಯುವಂತಾಗಿದೆ. ಕಲುಷಿತಗೊಂಡ ಕೆರೆ ನೀರು ಬಳಸಿ ಇಲ್ಲಿನ ಗ್ರಾಮಸ್ಥರು ವಿವಿಧ ಖಾಯಿಲೆಗಳಿಗೆ ಗುರಿಯಾಗಿದ್ದಾರೆ. ಕುಡಿಯಲು ಸೇರಿದಂತೆ ದೈನಂದಿನ ಚಟುವಟಿಕೆಗಳಿಗೆ ಬಳಸಲು ಕೆರೆ ನೀರು ಯೋಗ್ಯವಿಲ್ಲದಂತಾಗಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾದವರ ಮೇಲೆ ಪ್ರಕರಣಗಳು ದಾಖಲಾಗಿವೆ. ಆದರೆ ಈ ಬಗ್ಗೆ ಹಲವು ಬಾರಿ ದೂರು ನೀಡಿದರು ಯಾವುದೇ ಕ್ರಮವಹಿಸಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಕೂಡ ಇಲ್ಲಿಗೆ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಉಪಲೋಕಾಯುಕ್ತರಿಗೆ ತಮ್ಮ ಅಳಲು ತೋಡಿಕೊಂಡರು.

ಮಕ್ಕಳಿಂದ ವೃದ್ಧರವರೆಗೂ ಇದೇ ನೀರನ್ನು ಬಳಸುತ್ತಿರುವ ಕಾರಣದಿಂದ ಹಲವಾರು ಮಾರಣಾಂತಿಕ ಕಾಯಿಲೆಗೆ ಜನರು ತುತ್ತಾಗಿದ್ದಾರೆ. ಕ್ಯಾನ್ಸರ್, ಚರ್ಮರೋಗ, ಕಿಡ್ನಿ ವೈಫಲ್ಯ, ಕಣ್ಣಿನ ಸಮಸ್ಯೆ ಸೇರಿದಂತೆ ಗರ್ಭಕೋಶ ತೊಂದರೆಗಳು ಸಹ ಈಗಾಗಲೇ ಜನರಲ್ಲಿ ಕಂಡುಬಂದಿದೆ. ಇದೇ ರೀತಿ ಮುಂದುವರೆದರೆ ಇನ್ನೂ ಹಲವಾರು ಕಾಯಿಲೆಗಳಿಗೆ ತುತ್ತಾಗುವ ಭಯದಿಂದ ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ಮಲ್ಲಪ್ಪ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಜಿಲ್ಲಾ ಕೈಗಾರಿಕಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಮುಖಂಡರು, ರೈತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

50 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

5 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

10 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

11 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

12 hours ago