ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ- ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ

ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ ಕಾರ್ಖಾನೆಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಎಂದು ಉಪ ಲೋಕಾಯುಕ್ತರಾದ ಬಿ. ವೀರಪ್ಪ ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಸೇರಿ ವಿವಿಧ ಕೆರೆಗಳಿಗೆ ಅನಿರೀಕ್ಷಿತ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತರು ನಗರಸಭೆಯ ಕಲುಷಿತ ನೀರು, ಕಾರ್ಖಾನೆ ತ್ಯಾಜ್ಯ ಸೇರಿ ಕುಡಿಯಲು ಬಳಸಲು ಯೋಗ್ಯವಲ್ಲದಂತ ನೀರು ಸರಬರಾಜು ನಿಲ್ಲಿಸಿ, ಗ್ರಾಮಸ್ಥರಿಗೆ ಕುಡಿಯಲು ಯೋಗ್ಯ ನೀರು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಮಾಲಿನ್ಯ ನೀರು ಹರಿಯುತ್ತಿರುವ ವಿವಿಧ ಕೆರೆಗಳು ಹಾಗೂ ಕಾರ್ಖಾನೆಗಳ ರಾಸಯನಿಕ ತ್ಯಾಜ್ಯಗಳು ಕೆರೆ ಸೇರಿ ಜನರ ಆರೋಗ್ಯದ ಮೇಲೆ ನಾನಾ ಪರಿಣಾಮ ಬೀರುತ್ತಿದೆ. ಮುಂಬರುವ ದಿನಗಳಲ್ಲಿ ಇದು ಇನ್ನು ಉಲ್ಬಣಿಸುವ ಸಾಧ್ಯತೆ ಹೆಚ್ಚಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಅಧಿಕಾರಿಗಳೇ ನೇರ ಹೊಣೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ತಾತ್ಕಾಲಿಕ ಕಟ್ಟಡ ನೀಡಿದರೂ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಉಪಲೋಕಾಯುಕ್ತರಿಗೆ ತಿಳಿಸಿದರು. ಈ ಬಗ್ಗೆ ಮಾತನಾಡಿದ ಅವರು, ಕಚೇರಿ ನೀಡಿದರು ಏಕೆ ಸ್ಥಳಾಂತರಿಸಿಲ್ಲ. ನೀವು ಮಾತ್ರ ಚೆನ್ನಾಗಿದ್ದರೆ ಸಾಕಾ, ಜನರಿಗೆ ಏನಾದರೂ ನಿಮಗೆ ಪರವಾಗಿಲ್ಲ ಅಲ್ವಾ? ಕೂಡಲೇ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು.

*ಗ್ರಾಮಸ್ಥರ ಅಳಲು*

ಚಿಕ್ಕತುಮಕೂರು, ದೊಡ್ಡತುಮಕೂರು, ಮಜರಾಹೊಸಹಳ್ಳಿ ಭಾಗದ ಜನರು ವಿವಿಧ ಬಳಕೆಗಳಿಗೆ ಕೆರೆ ನೀರಿನ ಮೇಲೆ ಅವಲಂಬಿತರಾಗಿದ್ದು, ಪ್ರಾಣಿಗಳು ಸಹ ಅದೇ ನೀರು ಕುಡಿಯುವಂತಾಗಿದೆ. ಕಲುಷಿತಗೊಂಡ ಕೆರೆ ನೀರು ಬಳಸಿ ಇಲ್ಲಿನ ಗ್ರಾಮಸ್ಥರು ವಿವಿಧ ಖಾಯಿಲೆಗಳಿಗೆ ಗುರಿಯಾಗಿದ್ದಾರೆ. ಕುಡಿಯಲು ಸೇರಿದಂತೆ ದೈನಂದಿನ ಚಟುವಟಿಕೆಗಳಿಗೆ ಬಳಸಲು ಕೆರೆ ನೀರು ಯೋಗ್ಯವಿಲ್ಲದಂತಾಗಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾದವರ ಮೇಲೆ ಪ್ರಕರಣಗಳು ದಾಖಲಾಗಿವೆ. ಆದರೆ ಈ ಬಗ್ಗೆ ಹಲವು ಬಾರಿ ದೂರು ನೀಡಿದರು ಯಾವುದೇ ಕ್ರಮವಹಿಸಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಕೂಡ ಇಲ್ಲಿಗೆ ಸ್ಥಳಾಂತರ ಮಾಡಿಲ್ಲ ಎಂದು ಗ್ರಾಮಸ್ಥರು ಉಪಲೋಕಾಯುಕ್ತರಿಗೆ ತಮ್ಮ ಅಳಲು ತೋಡಿಕೊಂಡರು.

ಮಕ್ಕಳಿಂದ ವೃದ್ಧರವರೆಗೂ ಇದೇ ನೀರನ್ನು ಬಳಸುತ್ತಿರುವ ಕಾರಣದಿಂದ ಹಲವಾರು ಮಾರಣಾಂತಿಕ ಕಾಯಿಲೆಗೆ ಜನರು ತುತ್ತಾಗಿದ್ದಾರೆ. ಕ್ಯಾನ್ಸರ್, ಚರ್ಮರೋಗ, ಕಿಡ್ನಿ ವೈಫಲ್ಯ, ಕಣ್ಣಿನ ಸಮಸ್ಯೆ ಸೇರಿದಂತೆ ಗರ್ಭಕೋಶ ತೊಂದರೆಗಳು ಸಹ ಈಗಾಗಲೇ ಜನರಲ್ಲಿ ಕಂಡುಬಂದಿದೆ. ಇದೇ ರೀತಿ ಮುಂದುವರೆದರೆ ಇನ್ನೂ ಹಲವಾರು ಕಾಯಿಲೆಗಳಿಗೆ ತುತ್ತಾಗುವ ಭಯದಿಂದ ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ಮಲ್ಲಪ್ಪ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಜಿಲ್ಲಾ ಕೈಗಾರಿಕಾ ಇಲಾಖೆ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಮುಖಂಡರು, ರೈತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

12 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

18 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

22 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago