Categories: ಕೋಲಾರ

ಮಾಲೀಕರಿಂದ ಕಾರ್ಮಿಕರ ಮೇಲಿನ ಶೋಷಣೆ ನಿಲ್ಲಬೇಕು: ಗಾಂಧಿನಗರ ನಾರಾಯಣಸ್ವಾಮಿ

ಕೋಲಾರ: ಕಾರ್ಮಿಕರ ನೂರಾರು ಹೋರಾಟಗಳ ಫಲವಾಗಿ ದೇಶದಲ್ಲಿ ಜಾರಿಯಾಗಿರುವ ಹಲವು ಕಾರ್ಮಿಕ ಕಾನೂನುಗಳನ್ನು ಇಂದು ಮಾಲೀಕರ ಪರವಾಗಿ ತಿದ್ದುಪಡಿ ಮಾಡಿ, ಕಾರ್ಮಿಕರನ್ನು ಶೋಷಣೆ ಮಾಡಲು ಮುಕ್ತ ಅವಕಾಶವನ್ನು ನೀಡಿದೆ. ಈ ಕುರಿತು ಕಾರ್ಮಿಕರು ಒಗ್ಗಟ್ಟಿನಿಂದ ಸಮರಶೀಲ ಹೋರಾಟವನ್ನು ನಡೆಸಬೇಕಾದ ಅನಿವಾರ್ಯತೆ ಇದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರಾಂಗಣದಲ್ಲಿರುವ ಹಲವು ಕೈಗಾರಿಕಾ ಕಾರ್ಮಿಕ ಸಂಘಟನೆಗಳ ಜಂಟಿಯಾಗಿ ಎಕ್ಸಿಡಿ ಕೈಗಾರಿಕೆಯ ಮುಂಭಾಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಕಾರ್ಮಿಕರನ್ನು ತೀವ್ರ ರೀತಿಯಲ್ಲಿ ಶೋಷಣೆ ಮಾಡುತ್ತಿದ್ದ ಅಮೇರಿಕಾದ ಚಿಕಾಗೋ ನಗರದಲ್ಲಿ 1886ರಲ್ಲಿ ಕೆಲಸದ ಅವಧಿಯನ್ನು 8 ನಿಗದಿ ಮಾಡಬೇಕೆಂದು ನಡೆದ ಹೋರಾಟದ ಸಂದರ್ಭದಲ್ಲಿ 6 ಮಂದಿ ಕಾರ್ಮಿಕರು ಹುತಾತ್ಮರಾದರು ಇವರ ನೆನಪಿಗಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಣೆ ನಡೆಸಲಾಗುತ್ತಿದೆ ಎಂದು ಸ್ಮರಿಸಿದರು.

ದೇಶದ ಸ್ವಾತಂತ್ರ್ಯ ಪೂರ್ವದಲ್ಲಿ ಜಾರಿಯಾಗಿದ್ದ ಹಲವಾರು ಕಾನೂನುಗಳನ್ನು ಸುಧಾರಣೆಯ ಹೆಸರಿನಲ್ಲಿ ಮಾಲೀಕರಿಗೆ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಲಾಗುತ್ತಿದೆ. ಕಾರ್ಮಿಕರು ಸಂಘ ರಚಿಸುವುದು ಸಂವಿಧಾನಾತ್ಮಕ ಹಕ್ಕಾಗಿದ್ದರೂ, ಸಂಘ ರಚಿಸುವುದು, ದುಡಿಮೆಗೆ ತಕ್ಕ ಪ್ರತಿಫಲ ಕೇಳುವುದು, ಪ್ರತಿಭಟನೆ ನಡೆಸುವುದು ಅಪರಾಧ ಎಂಬ ರೀತಿಯಲ್ಲಿ ಕಾನೂನುಗಳನ್ನು ತಿದ್ದುಪಡಿ ಮಾಡಿ, ಅದನ್ನು ಜಾರಿ ಮಾಡಲು ಈಗಿನ ಕೇಂದ್ರ ಸರ್ಕಾರ ಆವಣಿಸುತ್ತಿದೆ ಎಂದು ಗಾಂಧಿನಗರ ನಾರಾಯಣಸ್ವಾಮಿ ದೂರಿದರು

ಲೋಕಸಭಾ ಚುನಾವಣೆಯ ದೃಷ್ಟಿಕೋನದಲ್ಲಿ ಚುನಾವಣಾ ಬಾಂಡ್ ಮೂಲಕ ಕಾರ್ಪೋರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಲಂಚ ಪಡೆದು, ಅವರ ಅನುಕೂಲಕ್ಕೆ ತಕ್ಕಂತೆ ಕಾನೂನುಗಳನ್ನು ಬದಲಾಯಿಸುತ್ತಿದೆ ಇತ್ತೀಚಿನ ದಿನಗಳಲ್ಲಿ ಉದ್ದಿಮೆಗಳು, ಸರ್ಕಾರಿ ಕಛೇರಿಗಳು, ಕೈಗಾರಿಕೆಗಳಲ್ಲಿ ಖಾಯಂ ಸ್ವರೂಪದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳದೇ ಕೇವಲ ಗುತ್ತಿಗೆ ಕಾರ್ಮಿಕರನ್ನು, ಟ್ರೈನಿಗಳನ್ನು ನೇಮಕ ಮಾಡಿಕೊಂಡು ಅತ್ಯಂತ ಕಡಿಮೆ ವೇತನವನ್ನು ನೀಡಿ, ಹೆಚ್ಚಿನ ಕೆಲಸವನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ವೇತನವನ್ನು ನೀಡುತ್ತಿಲ್ಲ. ಈ ಬಗ್ಗೆ ಎಲ್ಲಾ ಕಾರ್ಮಿಕರು ಒಗ್ಗಟ್ಟಿನಿಂದ ಸಮರಶೀಲ ಹೋರಾಟಗಳನ್ನು ನಡೆಸುವ ಅಗತ್ಯ ಇದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ ಮೇ ದಿನಾಚರಣೆಯ ಪ್ರಮುಖ್ಯತೆಯನ್ನು ವಿವರಿಸಿದರಲ್ಲದೇ ಕಾರ್ಮಿಕರು ಸ್ವಹಿತಾಸಕ್ತಿಗಳಿಗೆ ಬಲಿಯಾದ ಕಾರ್ಮಿಕರ ಹಿತವನ್ನು ಕಾಯುವಂತಾಗಬೇಕು. ಕಾರ್ಮಿಕರ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಗೆಲುವು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ.ಕೃಷ್ಣಪ್ಪ ಮಾತನಾಡಿ ಕಾರ್ಮಿಕರು ತಮ್ಮ ಬೇಡಿಕೆಗಳ ಜೊತೆಗೆ ರಾಜಕೀಯ ಹೋರಾಟವನ್ನು ನಡೆಸಿದರೆ ಮಾತ್ರ ನಮ್ಮ ಬೇಡಿಕೆಗಳು ಈಡೇರಲು ಸಾಧ್ಯ ಇದಕ್ಕೆ ಕಾರ್ಮಿಕರನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು ವಿಧಾನಸೌಧ, ಲೋಕಸಭೆಯಲ್ಲಿ ಇದ್ದರೆ ಕಾರ್ಮಿಕರ ಹೋರಾಟ ನಡೆಸಲು ಕಾನೂನು ರೂಪಿಸಲು ಸಾಧ್ಯ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ವಿವಿಧ ಕೈಗಾರಿಕಾ ಕಾರ್ಮಿಕ ಸಂಘಟನೆಗಳ ಮುಖಂಡ ರಾಜು, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಮುಖಂಡ ಕುರ್ಕಿ ದೇವರಾಜ್ ಮತ್ತಿತರರು ಮಾತನಾಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಭೀಮರಾಜ್, ಸಿಐಟಿಯು ಮುಖಂಡ ಮೋಹನ್‌ಬಾಬು, ಡಿವೈಎಫ್‌ಐ ಮುಖಂಡ ಮುಸ್ತಾಪ, ಎಕ್ಸಿಡಿ ಕಾರ್ಮಿಕರ ಸಂಘದ ಮುಖಂಡರಾದ ವಿ.ಹರೀಶ್, ಪ್ರಮೋದ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

6 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago