ಕೋಲಾರ: ಮಾಲೂರಿನ ಸರ್ವೆ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸಿ.ಬಿ.ಐ ಗೆ ಒಪ್ಪಿಸಿ ನೂರಾರು ಹಳ್ಳಿಗಳ ಪಿ-ನಂಬರ್ ದುರಸ್ತಿ ಕಡತಗಳನ್ನು ಎ.ಡಿ.ಎಲ್.ಆರ್. ಕೊಠಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವ ಅಧಿಕಾರಿ ನಿವೇದಿತ, ಭೂದಾಖಲೆಗಳ ಸಹಾಯಕ ನಿರ್ದೇಶಕರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ರೈತರ ಹೆಸರಿನಲ್ಲಿ ಭೂ ಮಾಫಿಯಾ ರವರಿಗೆ ಸರ್ಕಾರಿ ಜಮೀನು ಮಂಜೂರಾತಿಯನ್ನು ರದ್ದು ಮಾಡಬೇಕೆಂದು ರೈತ ಸಂಘದಿಂದ ಮಾಲೂರು ತಾಲ್ಲೂಕು ಕಚೇರಿ ಮುಂದೆ ಪೊರಕೆಗಳನ್ನು ಹಿಡಿದು ಹೋರಾಟ ಮಾಡಿ, ತಾಲ್ಲೂಕು ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗೆ ಹಾಗೂ ಆಯುಕ್ತರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಮಾಲೂರಿನ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ನಿರಂತರವಾಗಿ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವ ಬಗ್ಗೆ ಮತ್ತು ರೈತಾಪಿ ವರ್ಗದ ಜನರ ಯಾವುದೇ ಪೋಡಿ, ಹದ್ದುಬಸ್ತು, ಇ-ಸ್ವತ್ತು, ವಿವಿಧ ಅಳತೆ ಕಾರ್ಯಗಳಿಗಾಗಿ ಮತ್ತು ನಕ್ಷೆಗಳಿಗಾಗಿ ಅಕ್ರಮ ಸಂಭಾವನೆ ಪಡೆಯುತ್ತಿರುವ ಬಗ್ಗೆ ಅನೇಕ ಬಾರಿ ಪ್ರತಿಭಟನೆಗಳು ನಡೆಸಲಾಗಿತ್ತು ಮತ್ತು ಇತ್ತೀಚೆಗೆ ಎಡಿಎಲ್ಆರ್ ಅಶ್ವಿನಿ ರವರು ಲಂಚ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲಿಗೆ ಹೋದ ಬೆನ್ನಲ್ಲೆ ಉತ್ತಮವಾದ ಅಧಿಕಾರಿಗಳನ್ನು ನಿಯೋಜಿಸುವ ಬದಲು ಮೇಲಾಧಿಕಾರಿಗಳ ಮೇಲೆ ಜನಪ್ರತಿನಿಧಿಗಳು ಒತ್ತಡ ಹೇರಿ ಮುಳಬಾಗಿಲು ತಾಲ್ಲೂಕಿನಲ್ಲಿ ಅನೇಕ ಅಕ್ರಮಗಳಲ್ಲಿ ಭಾಗಿಯಾಗಿರುವ ಕುಮಾರಿ ನಿವೇದಿತ, ಭೂದಾಖಲೆಗಳ ಸಹಾಯಕ ನಿರ್ದೇಶಕರವರನ್ನು ಪ್ರಭಾರೆ ಎಡಿಎಲ್ಆರ್ ಆಗಿ ಹಾಗೂ ಕೋಲಾರದಿಂದ ಭ್ರಷ್ಟ ಅಧಿಕಾರಿ
ರವಿಕುಮಾರ್, ರ್ವೆ ಸೂಪರ್ ವೈಸರ್ ರವರನ್ನು ಪ್ರಭಾರೆಯಾಗಿ ನಿಯೋಜಿಸಿದ್ದಾರೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಭ್ರಷ್ಟಾಚಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಜುಲೈ ತಿಂಗಳಲ್ಲಿ ಕೆಲವು ಜನಪ್ರತಿನಿಧಿಗಳು ಸಿಸಿ ಟಿವಿ ಆಫ್ ಮಾಡಿರುತ್ತಾರೆಂದು ದಾಖಲೆಗಳನ್ನು ಸೇರಿಸಿರುತ್ತಾರೆಂದು ದೂರುಗಳ ನೆಪದಲ್ಲಿ ಸಿಸಿ ಟಿವಿ ಫೂಟೇಜಸ್ ಅನ್ನು ಡಿಲೀಟ್ ಮಾಡುವ ಮೂಲಕ ಈ ಹಿಂದಿನ ಎಡಿಎಲ್ಆರ್ ಅಶ್ವಿನಿ ರವರು ಮಾಡಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನಾಶ ಮಾಡಿರುತ್ತಾರೆಂದು ಅನೇಕ ಅನುಮಾನಗಳು ಬಂದ
ಹಿಂದೆಯೇ ಈಗ ಮತ್ತೇ ಅಕ್ರಮಗಳಿಗೆ ಅವಕಾಶ ಮಾಡಿಕೊಡುತ್ತಿರುವುದು ಇಲಾಖೆಯ ಕಿರಿಯ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳ ಹಿಡತ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪ ಮಾಡಿದರು.
ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಗಿರೀಶ್, ಮಂಗಸಂದ್ರ ತಿಮ್ಮಣ್ಣ, ಹರೀಶ್ ಸುಪ್ರಿಂ ಚಲ, ವಿನುತ್ ಪಾರುಕ್ಪಾಷ, ಬಂಗಾರಿ ಮಂಜು, ವಿಜಯ್ಪಾಲ್, ಭಾಸ್ಕರ್, ಶಶಕುಮಾರ್, ಮುನಿರಾಜು, ರತ್ನಮ್ಮ, ಶೈಲಜ, ಗೌರಮ್ಮ, ವೆಂಕಟಮ್ಮ,, ನಾರೆಮ್ಮ,
ಸಾವಿತ್ರಮ್ಮ, ಮುನಿರತ್ನಮ್ಮ, ಸರೋಜಮ್ಮ, ಜಯಲಕ್ಷ್ಮಮ್ಮ, ಮುನಿಯಮ್ಮ, ರಾಮಕ್ಕ ಮುಂತಾದವರು ಇದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…